ಶ್ರೀನಿವಾಸ್ ಪ್ರಸಾದ್ 
ರಾಜಕೀಯ

ಸಿದ್ದರಾಮಯ್ಯ ಹೊಟ್ಟೆಕಿಚ್ಚಿನ ಮನುಷ್ಯ: ಸಿಎಂ ವಿರುದ್ಧ ಶ್ರೀನಿವಾಸ್ ಪ್ರಸಾದ್ ಮತ್ತೆ ವಾಗ್ದಾಳಿ

ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ರೆಬಲ್ ಆಗಿರುವ ಮಾಜಿ ಸಚಿವ ವಿ,ಶ್ರೀನಿವಾಸ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಮೈಸೂರು: ತಮ್ಮನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದಕ್ಕೆ ರೆಬಲ್ ಆಗಿರುವ ಮಾಜಿ ಸಚಿವ ವಿ,ಶ್ರೀನಿವಾಸ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದು, ಸಿದ್ದರಾಮಯ್ಯ ಹೊಟ್ಟೆಕಿಚ್ಚಿನ ಮನುಷ್ಯ. ತಮ್ಮ ಸ್ವಾರ್ಥಕ್ಕಾಗಿ ಸಂಪುಟ ಪುನಾರಚನೆ ಮಾಡಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾತ್, ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವಲ್ಲಿ ನನ್ನ ಪ್ರಯತ್ನವೂ ಇದೆ. ವರುಣಾದಲ್ಲಿ ಸಿದ್ದರಾಮಯ್ಯರನ್ನು ನಿಲ್ಲಿಸಿದ್ದೆ ನಾನು. ಆದ್ರೆ ಸಿಎಂ ನನಗೆ ವಿಶ್ವಾಸದ್ರೋಹ ಎಸಗಿದರು. ಹಾಗಾಗಿ ವಿಶ್ವಾಸದ್ರೋಹಿ ವಿರುದ್ಧ ಮಾತನಾಡುವ ಸಮಯ ಈಗ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅಹಂಕಾರದ ಸಿಎಂ. ಅವರು ಅನಾಗರಿಕವಾಗಿ ವರ್ತಿಸಿದ್ದಾರೆ. ಸಿಎಂ ಹೊಟ್ಟೆಕಿಚ್ಚಿನ ಮನುಷ್ಯ. ತಮ್ಮ ಸ್ವಾರ್ಥಕ್ಕಾಗಿ ಸಂಪುಟ ಪುನಾರಚನೆ ಮಾಡಿರುವುದಾಗಿ ದೂರಿದರು.
ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್ ಸಿಂಗ್ ಅವರ ಸ್ವಾರ್ಥದಿಂದ ಈ ಸಂಪುಟ ಪುನಾರಚನೆ ಆಗಿದೆ. ಸಿದ್ದರಾಮಯ್ಯ ಸಣ್ಣತನವಿರುವ ಮನುಷ್ಯ. ಅವರ ಜೊತೆ ಮಾತು ಬಿಡಿ, ಮುಖ ನೋಡಲು ಇಷ್ಟವಿಲ್ಲ. ಸಚಿವ ಸ್ಥಾನದಿಂದ ನಾನು ಗೌರವದ ನಿವೃತ್ತಿ ಬಯಸಿದ್ದೆ. ಆದರೆ ಸಿದ್ದರಾಮಯ್ಯ ನನಗೆ ಸಂಧ್ಯಾಕಾಲದಲ್ಲಿ ಅವಮಾನ ಮಾಡಿಬಿಟ್ಟ ಎಂದು ಏಕವಚನದಲ್ಲಿ ಅಸಮಾಧಾನವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT