ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. 
ರಾಜಕೀಯ

ಲೋಕಾಯುಕ್ತ ಬಲವರ್ಧನೆಗೆ ಬಿಜೆಪಿಯಿಂದ ಧರ್ಮಯುದ್ಧ: ಬಿಎಸ್ ವೈ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ...

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ ಧರ್ಮಯುದ್ಧ ನಡೆಸುವುದಾಗಿ ಎಚ್ಚರಿಕೆ ನೀಡಿದೆ. 
ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಅನಂತ್ ಕುಮಾರ್, ಜಗದೀಶ್ ಶೆಟ್ಟರ್, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಸಲುವಾಗಿ ಕಾಂಗ್ರೆಸ್ ಎಸಿಬಿಯನ್ನು ರಚನೆ ಮಾಡಿದೆ. ಆದರೆ, ಲೋಕಾಯುಕ್ತ ಬಲವರ್ಧನೆಗಾಗಿ ಬಿಜೆಪಿ ಧರ್ಮಯುದ್ಧ ನಡೆಸಲಿದೆ ಎಂದ ಅವರು, ಈ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ. 
ಎಸಿಬಿ ರಚನೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಸಚಿವ ಸಂಪುಟದ ಸಚಿವರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿಯ ಹಠಮಾರಿ ಧೋರಣೆ ತಾಳಿದೆ. ಹಾಗಾಗಿ, ಎಸಿಬಿ ರಚನೆ ಕೈಬಿಡುವ ತನಕ ರಾಜ್ಯಾದ್ಯಂತ ವಿವಿಧ ಹಂತದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ