ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. 
ರಾಜಕೀಯ

ಲೋಕಾಯುಕ್ತ ಬಲವರ್ಧನೆಗೆ ಬಿಜೆಪಿಯಿಂದ ಧರ್ಮಯುದ್ಧ: ಬಿಎಸ್ ವೈ

ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ...

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ ಧರ್ಮಯುದ್ಧ ನಡೆಸುವುದಾಗಿ ಎಚ್ಚರಿಕೆ ನೀಡಿದೆ. 
ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಅನಂತ್ ಕುಮಾರ್, ಜಗದೀಶ್ ಶೆಟ್ಟರ್, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಸಲುವಾಗಿ ಕಾಂಗ್ರೆಸ್ ಎಸಿಬಿಯನ್ನು ರಚನೆ ಮಾಡಿದೆ. ಆದರೆ, ಲೋಕಾಯುಕ್ತ ಬಲವರ್ಧನೆಗಾಗಿ ಬಿಜೆಪಿ ಧರ್ಮಯುದ್ಧ ನಡೆಸಲಿದೆ ಎಂದ ಅವರು, ಈ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ. 
ಎಸಿಬಿ ರಚನೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಸಚಿವ ಸಂಪುಟದ ಸಚಿವರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿಯ ಹಠಮಾರಿ ಧೋರಣೆ ತಾಳಿದೆ. ಹಾಗಾಗಿ, ಎಸಿಬಿ ರಚನೆ ಕೈಬಿಡುವ ತನಕ ರಾಜ್ಯಾದ್ಯಂತ ವಿವಿಧ ಹಂತದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್