ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ವಿಚಾರದಲ್ಲಿ ಸರ್ಕಾರದ ನಿಲುವನ್ನು ಖಂಡಿಸಿದ ಬಿಜೆಪಿ, ಲೋಕಾಯುಕ್ತ ಬಲವರ್ಧನೆಗೆ ಧರ್ಮಯುದ್ಧ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಎಸಿಬಿ ರಚನೆಯನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ನಾಯಕರು ಸೋಮವಾರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವ ಅನಂತ್ ಕುಮಾರ್, ಜಗದೀಶ್ ಶೆಟ್ಟರ್, ಆರ್ ಅಶೋಕ್, ಸಿಟಿ ರವಿ ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು.
ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚುವ ಸಲುವಾಗಿ ಕಾಂಗ್ರೆಸ್ ಎಸಿಬಿಯನ್ನು ರಚನೆ ಮಾಡಿದೆ. ಆದರೆ, ಲೋಕಾಯುಕ್ತ ಬಲವರ್ಧನೆಗಾಗಿ ಬಿಜೆಪಿ ಧರ್ಮಯುದ್ಧ ನಡೆಸಲಿದೆ ಎಂದ ಅವರು, ಈ ಕುರಿತು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.
ಎಸಿಬಿ ರಚನೆಗೆ ಬಿಜೆಪಿ ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಸಚಿವ ಸಂಪುಟದ ಸಚಿವರ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿಯ ಹಠಮಾರಿ ಧೋರಣೆ ತಾಳಿದೆ. ಹಾಗಾಗಿ, ಎಸಿಬಿ ರಚನೆ ಕೈಬಿಡುವ ತನಕ ರಾಜ್ಯಾದ್ಯಂತ ವಿವಿಧ ಹಂತದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos