ಕಾಗೋಡು ತಿಮ್ಮಪ್ಪ 
ರಾಜಕೀಯ

ಸದನದಲ್ಲಿ ಸೀರೆ ಬಿಚ್ಚಬೇಡಿ: ಶಾಸಕ ಕಾರಜೋಳಾಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸಲಹೆ

ವಿಧಾನಸಭೆಯ ಕಲಾಪದ ವೇಳೆ ಸೀರೆ ಬಿಚ್ಚ ಹೊರಟ ಬಿಜೆಪಿ ಹಿರಿಯ ಶಾಸಕ ಗೋವಿಂದ ಕಾರಜೋಳಾಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೀರೆ ಬಿಚ್ಚುವುದು ಬೇಡ ಎಂದು...

ವಿಧಾನಸಭೆ: ವಿಧಾನಸಭೆಯ ಕಲಾಪದ ವೇಳೆ ಸೀರೆ ಬಿಚ್ಚಲು ಮುಂದಾದ ಬಿಜೆಪಿ ಹಿರಿಯ ಶಾಸಕ ಗೋವಿಂದ ಕಾರಜೋಳಾಗೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಸೀರೆ ಬಿಚ್ಚುವುದು ಬೇಡ ಎಂದು ಸಲಹೆ ನೀಡಿದರು.

ವಿಧಾನಸಭೆ ಕಲಾಪಕ್ಕೆ ಸೀರೆ ತಂದಿದ್ದ ಶಾಸಕ ಗೋವಿಂದ ಕಾರಜೋಳ ಅವರು ಇನ್ನೇನು ಸೀರೆ ಬಿಚ್ಚಬೇಕು ಎನ್ನುವಷ್ಟರಲ್ಲಿ ಮಧ್ಯಪ್ರವೇಶಿಸಿದ ಸ್ಪೀಕರ್ ಅವರು ಈ ರೀತಿ ಸಲಹೆ ನೀಡಿದರು.

ಸದನಕ್ಕೆ ಸೀರೆ ಯಾಕೆ ತಂದಿದ್ದರು ಎಂಬ ಎಲ್ಲರ ಕುತೂಹಲದ ಪ್ರಶ್ನೆಗೆ ಉತ್ತರಿಸಿದ ಕಾರಜೋಳ, ಅಂಗನವಾಡಿ ಸಹಾಯಕಿಯರಿಗೆ ಪ್ರತಿ ವರ್ಷ ಎರಡು ಸೀರೆ ಕೊಡಲು ಸರ್ಕಾರ ಯೋಜನೆ ರೂಪಿಸಿದ್ದು. ಪ್ರತಿ ಸೀರೆಗೆ ರು.300 ರಂತೆ 2.60 ಲಕ್ಷ ಸೀರೆಗಳನ್ನು ಖರೀದಿಸಿದೆ. ಸರ್ಕಾರ ಖರೀದಿಸಿದ ಸೀರೆಗಳು ಅತ್ಯಂತ ಕಳಪೆ ಮಟ್ಟದಿಂದ ಕೂಡಿವೆ. ಮಾರುಕಟ್ಟೆಯಲ್ಲಿ ರುಪಾಯಿ 70 ರಿಂದ 80 ರುಪಾಯಿಗೆ ಈ ಸೀರೆಗಳು ಸಿಗುತ್ತವೆ. ಆದರೆ ಸರ್ಕಾರ ಖರೀದಿ ಮಾಡಿದ ದರವನ್ನು ನೋಡಿದರೆ ಇದರಲ್ಲಿ ಏನೋ ನಡೆದಿದೆ ಎಂಬುದು ಎಲ್ಲರಿಗೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT