ಬಾಬೂರಾವ್ ಚಿಂಚನಸೂರ್ ಮತ್ತು ಜಗದೀಶ್ ಶೆಟ್ಟರ್ 
ರಾಜಕೀಯ

ಟೆಂಡರ್ ಮೊತ್ತ ಹೆಚ್ಚಿಸಲು ಸಚಿವ ಚಿಂಚನಸೂರ್ ರಿಂದ 2 ಕೋಟಿ ಲಂಚ ಬೇಡಿಕೆ: ಶೆಟ್ಟರ್ ಆರೋಪ

ಬ್ರೇಕ್‌ ವಾಟರ್‌ ಕಾಮಗಾರಿಯ ಟೆಂಡರ್‌ ಮಂಜೂರು ಮಾಡಿಸಲು ಬಂದರು ಸಚಿವ ಬಾಬುರಾವ್‌ ಚಿಂಚನಸೂರು ಅವರು ಗುತ್ತಿಗೆ ಕಂಪೆನಿಯೊಂದರಿಂದ ರು. 2 ...

ಬೆಂಗಳೂರು: ಬ್ರೇಕ್‌  ವಾಟರ್‌ ಕಾಮಗಾರಿಯ ಟೆಂಡರ್‌  ಮಂಜೂರು ಮಾಡಿಸಲು ಬಂದರು ಸಚಿವ ಬಾಬುರಾವ್‌ ಚಿಂಚನಸೂರು ಅವರು ಗುತ್ತಿಗೆ ಕಂಪೆನಿಯೊಂದರಿಂದ ರು. 2 ಕೋಟಿ ಲಂಚ ಪಡೆದಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೆಟ್ಟರ್‌ ಇನ್ನೊಂದು ಪ್ರಕರಣದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)  ಕಾಮಗಾರಿಯೊಂದರಲ್ಲಿ ಟೆಂಡರ್‌ ಮೊತ್ತ ಹೆಚ್ಚಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ’ ಎಂದು ದೂರಿದ್ದಾರೆ .ಪ್ರಕರಣಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಗುತ್ತಿಗೆದಾರರ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಗಳ ಧ್ವನಿ ತುಣುಕುಗಳನ್ನು ಶೆಟ್ಟರ್ ಬಿಡುಗಡೆ ಮಾಡಿದರು.

ಸಾರ್ವಜನಿಕರಿಂದ ಲಭ್ಯವಾದ ಈ ಧ್ವನಿ ತುಣುಕಿನಲ್ಲಿರುವುದು ಸಚಿವರದೇ ಧ್ವನಿ. ಇದನ್ನು ದೃಢೀಕರಣ ಪರೀಕ್ಷೆಗೆ ಒಳಪಡಿಸಿಲ್ಲ. ಆದರೆ, ಸಚಿವರು ಈ ಆರೋಪ ನಿರಾಕರಿಸಿದರೆ, ಅದನ್ನು ಸಾಬೀತುಪಡಿಸಲು ಸಿದ್ಧ  ಎಂದು ಸವಾಲು ಹಾಕಿದರು.

ಕೆಐಎಡಿಬಿ ಕಾಮಗಾರಿಯ  ಟೆಂಡರ್‌  ಪ್ರಕರಣದ ಸಂಭಾಷಣೆಯಲ್ಲಿ ಬೃಹತ್‌ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ಅವರ ಹೆಸರೂ ಪ್ರಸ್ತಾಪವಾಗಿದೆ. ದೇಶಪಾಂಡೆ ಅವರಿಗೆ ಲಂಚ ನೀಡಬೇಕಾಗುತ್ತದೆ ಎಂದು ಗುತ್ತಿಗೆದಾರರು ಹೇಳಿರುವ ಧ್ವನಿ ತುಣುಕು ಲಭ್ಯವಾಗಿದೆ. ಹಾಗಾಗಿ ಅವರೂ ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕ ಎಂದು ಶೆಟ್ಟರ್‌ ಆಗ್ರಹಿಸಿದ್ದಾರೆ.

ಈ ಎರಡೂ ಪ್ರಕರಣಗಳನ್ನು ಸಿಬಿಐ  ತನಿಖೆಗೆ ಒಳಪಡಿಸಬೇಕು. ಸಚಿವರಾದ  ಚಿಂಚನಸೂರು ಮತ್ತು ಆರ್‌.ವಿ. ದೇಶಪಾಂಡೆ ರಾಜೀನಾಮೆ ನೀಡಬೇಕು. ಅವರಾಗಿ ರಾಜೀನಾಮೆ ನೀಡದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಸಚಿವರಿಂದ ರಾಜೀನಾಮೆ ಪಡೆಯಬೇಕು ಎಂದು ಶೆಟ್ಟರ್ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT