ಅಶೋಕ್ ಖೇಣಿ 
ರಾಜಕೀಯ

ರಾಜ್ಯಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗೆ ಅಶೋಕ್ ಖೇಣಿ ಬೆಂಬಲ

ನೈಸ್ ಯೋಜನೆ ವಿವಾದಲ್ಲಿ ಗೌಡರ ವಿರುದ್ಧ ಗುಡುಗುವ ಅಶೋಕ್ ಖೇಣಿ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ರಾಜ್ಯಸಭೆ ..

ಬೆಂಗಳೂರು: ನೈಸ್ ಯೋಜನೆ ವಿವಾದಲ್ಲಿ ಗೌಡರ ವಿರುದ್ಧ ಗುಡುಗುವ ಅಶೋಕ್ ಖೇಣಿ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ. ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ಉದ್ಯಮಿ ಬಿ.ಎಂ.ಫಾರೂಕ್ ಅವರಿಗೆ ಟಿಕೆಟ್ ನೀಡಿದೆ.

ಫಾರೂಕ್ ಅವರ ನಾಮಪತ್ರಕ್ಕೆ ಕರ್ನಾಟಕ ಮಕ್ಕಳ ಪಕ್ಷದ ಅಧ್ಯಕ್ಷ ಮತ್ತು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಅವರು ಸೂಚಕರಾಗಿ ಸಹಿ ಹಾಕಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗೆ ಕನಿಷ್ಟ ಹತ್ತು ಜನ ಹಾಲಿ ಶಾಸಕರು ಸೂಚಕರಾಗಿ ಸಹಿ ಮಾಡಬೇಕು. ಫಾರೂಕ್ ಅವರ ನಾಮಪತ್ರಕ್ಕೆ ಖೇಣಿ ಸಹಿ ಹಾಕಿದ್ದು, ಅವರ ನಡೆ ರಾಜಕೀಯ ವಲಯದಲ್ಲಿ ಅಚ್ಚರಿಗೆ ಕಾರಣವಾಗಿದೆ.

ಉದ್ಯಮಿ ಬಿ.ಎಂ.ಫಾರೂಕ್ ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಎ.ಮೊಯಿದ್ದಿನ್ ಬಾವಾ ಅವರ ಸಹೋದರ. ಬೆಂಗಳೂರಿನ ಬ್ಯಾರೀಸ್ ವೆಲೆಧೀರ್ ಅಸೋಸಿಯೇಶನ್‌ನ ಅಧ್ಯಕ್ಷರು ಬಿ.ಎಂ.ಫಾರೂಕ್ ಇಂಜಿನಿಯರಿಂಗ್ ಶಿಕ್ಷಣ ಪಡೆದಿರುವ ಅವರು ಪವನ ವಿದ್ಯುತ್, ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಅಲ್ಪಸಂಖ್ಯಾತರ ಬಗ್ಗೆ ಧ್ವನಿ ಎತ್ತಲು ಮತ್ತು ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅನುಕೂಲವಾಗುವಂತೆ ಅವರಿಗೆ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT