ಜೈರಾಮ್ ರಮೇಶ್, ಪರಮೇಶ್ವರ, ಆಸ್ಕರ್ ಫರ್ನಾಂಡಿಸ್ ಹಾಗೂ ಇತರರು 
ರಾಜಕೀಯ

ರಾಜ್ಯಸಭೆ ಚುನಾವಣೆ: ಆಸ್ಕರ್‌ ಫರ್ನಾಂಡಿಸ್, ಜೈರಾಮ್‌ ರಮೇಶ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. 
ಚುನಾವಣಾ ಅಧಿಕಾರಿಗಳೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಸ್. ಮೂರ್ತಿ ಅವರಿಗೆ ಈ ಇಬ್ಬರು ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನಖರ್ಗೆ, ಆರ್.ವಿ. ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆರ್.ಬಿ. ತಿಮ್ಮಾಪುರ್, ವೀಣಾಅಚ್ಚಯ್ಯ, ರಿಜ್ವಾನ್ ಹರ್ಷದ್ ನಾಮಪತ್ರ ಸಲ್ಲಿಸಿದರೆ, ಮತ್ತೊಬ್ಬ ಅಭ್ಯರ್ಥಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂವೀರಭದ್ರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ತನ್ನ ಸಂಖ್ಯಾಬಲದೊಂದಿಗೆ ಇಬ್ಬರು ಅಭ್ಯರ್ಥಿಗಳನ್ನು ಅನಾಯಾಸವಾಗಿ ರಾಜ್ಯಸಭೆಗೆ ಆಯ್ಕೆ ಮಾಡಬಹುದಾಗಿದೆ. ತನ್ನ ಬಳಿ ಉಳಿಯುವ 33 ಹೆಚ್ಚುವರಿ ಮತಗಳು ಹಾಗೂ ಪಕ್ಷೇತರರು ಜೆಡಿಎಸ್‌ನ ಅತೃಪ್ತ ಶಾಸಕರ ಬೆಂಬಲ ಪಡೆದು ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಕಸರತ್ತು ನಡೆಸಿದೆ. ಉಳಿದಂತೆ ವಿಧಾನಪರಿಷತ್‌ಗೆ ತನ್ನ ಸಂಖ್ಯಾಬಲದಿಂದ ನಾಲ್ವರನ್ನು ಸುಲಭವಾಗಿ ಆಯ್ಕೆ ಮಾಡಬಹುದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ