ಜೈರಾಮ್ ರಮೇಶ್, ಪರಮೇಶ್ವರ, ಆಸ್ಕರ್ ಫರ್ನಾಂಡಿಸ್ ಹಾಗೂ ಇತರರು 
ರಾಜಕೀಯ

ರಾಜ್ಯಸಭೆ ಚುನಾವಣೆ: ಆಸ್ಕರ್‌ ಫರ್ನಾಂಡಿಸ್, ಜೈರಾಮ್‌ ರಮೇಶ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. 
ಚುನಾವಣಾ ಅಧಿಕಾರಿಗಳೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಸ್. ಮೂರ್ತಿ ಅವರಿಗೆ ಈ ಇಬ್ಬರು ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನಖರ್ಗೆ, ಆರ್.ವಿ. ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆರ್.ಬಿ. ತಿಮ್ಮಾಪುರ್, ವೀಣಾಅಚ್ಚಯ್ಯ, ರಿಜ್ವಾನ್ ಹರ್ಷದ್ ನಾಮಪತ್ರ ಸಲ್ಲಿಸಿದರೆ, ಮತ್ತೊಬ್ಬ ಅಭ್ಯರ್ಥಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂವೀರಭದ್ರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ತನ್ನ ಸಂಖ್ಯಾಬಲದೊಂದಿಗೆ ಇಬ್ಬರು ಅಭ್ಯರ್ಥಿಗಳನ್ನು ಅನಾಯಾಸವಾಗಿ ರಾಜ್ಯಸಭೆಗೆ ಆಯ್ಕೆ ಮಾಡಬಹುದಾಗಿದೆ. ತನ್ನ ಬಳಿ ಉಳಿಯುವ 33 ಹೆಚ್ಚುವರಿ ಮತಗಳು ಹಾಗೂ ಪಕ್ಷೇತರರು ಜೆಡಿಎಸ್‌ನ ಅತೃಪ್ತ ಶಾಸಕರ ಬೆಂಬಲ ಪಡೆದು ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಕಸರತ್ತು ನಡೆಸಿದೆ. ಉಳಿದಂತೆ ವಿಧಾನಪರಿಷತ್‌ಗೆ ತನ್ನ ಸಂಖ್ಯಾಬಲದಿಂದ ನಾಲ್ವರನ್ನು ಸುಲಭವಾಗಿ ಆಯ್ಕೆ ಮಾಡಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT