ಜೈರಾಮ್ ರಮೇಶ್, ಪರಮೇಶ್ವರ, ಆಸ್ಕರ್ ಫರ್ನಾಂಡಿಸ್ ಹಾಗೂ ಇತರರು 
ರಾಜಕೀಯ

ರಾಜ್ಯಸಭೆ ಚುನಾವಣೆ: ಆಸ್ಕರ್‌ ಫರ್ನಾಂಡಿಸ್, ಜೈರಾಮ್‌ ರಮೇಶ್ ನಾಮಪತ್ರ ಸಲ್ಲಿಕೆ

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆಸ್ಕರ್‌ಫರ್ನಾಂಡಿಸ್ ಹಾಗೂ ಜಯರಾಮ್‌ರಮೇಶ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು. 
ಚುನಾವಣಾ ಅಧಿಕಾರಿಗಳೂ ಆಗಿರುವ ವಿಧಾನಸಭೆಯ ಕಾರ್ಯದರ್ಶಿ ಎಸ್. ಮೂರ್ತಿ ಅವರಿಗೆ ಈ ಇಬ್ಬರು ನಾಯಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಹಾಗೂ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜನಖರ್ಗೆ, ಆರ್.ವಿ. ದೇಶಪಾಂಡೆ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ವಿಧಾನಪರಿಷತ್‌ಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಆರ್.ಬಿ. ತಿಮ್ಮಾಪುರ್, ವೀಣಾಅಚ್ಚಯ್ಯ, ರಿಜ್ವಾನ್ ಹರ್ಷದ್ ನಾಮಪತ್ರ ಸಲ್ಲಿಸಿದರೆ, ಮತ್ತೊಬ್ಬ ಅಭ್ಯರ್ಥಿ ಕೆಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂವೀರಭದ್ರಪ್ಪ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ತನ್ನ ಸಂಖ್ಯಾಬಲದೊಂದಿಗೆ ಇಬ್ಬರು ಅಭ್ಯರ್ಥಿಗಳನ್ನು ಅನಾಯಾಸವಾಗಿ ರಾಜ್ಯಸಭೆಗೆ ಆಯ್ಕೆ ಮಾಡಬಹುದಾಗಿದೆ. ತನ್ನ ಬಳಿ ಉಳಿಯುವ 33 ಹೆಚ್ಚುವರಿ ಮತಗಳು ಹಾಗೂ ಪಕ್ಷೇತರರು ಜೆಡಿಎಸ್‌ನ ಅತೃಪ್ತ ಶಾಸಕರ ಬೆಂಬಲ ಪಡೆದು ಮೂರನೇ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಕಸರತ್ತು ನಡೆಸಿದೆ. ಉಳಿದಂತೆ ವಿಧಾನಪರಿಷತ್‌ಗೆ ತನ್ನ ಸಂಖ್ಯಾಬಲದಿಂದ ನಾಲ್ವರನ್ನು ಸುಲಭವಾಗಿ ಆಯ್ಕೆ ಮಾಡಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT