ಜಿ ಪರಮೇಶ್ವರ 
ರಾಜಕೀಯ

ರುದ್ರೇಶ್‌ ಕೊಲೆ ಪ್ರಕರಣದಲ್ಲಿ ರೋಷನ್ ಬೇಗ್‌ ಕೈವಾಡವಿಲ್ಲ: ಗೃಹ ಸಚಿವ ಪರಮೇಶ್ವರ

ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ನಗರಾಭಿವೃದ್ಧಿ ಮತ್ತು ಹಜ್‌ ಸಚಿವ ಆರ್‌. ರೋಷನ್‌ ಬೇಗ್‌ ಕೈವಾಡವಿದೆ...

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ನಗರಾಭಿವೃದ್ಧಿ ಮತ್ತು ಹಜ್‌ ಸಚಿವ ಆರ್‌. ರೋಷನ್‌ ಬೇಗ್‌ ಕೈವಾಡವಿದೆ ಎಂಬ ಮಾಜಿ ಸಚಿವೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇದೊಂದು ಆಧಾರ ರಹಿತ ಆರೋಪ ಎಂದಿದ್ದಾರೆ. 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ನಮ್ಮ ಇಲಾಖೆಯಿಂದ ಬಂದಿರುವ ಸದ್ಯದ ಮಾಹಿತಿ ಪ್ರಕಾರ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ರೋಷನ್‌ ಬೇಗ್‌ ಅವರ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ರೋಷನ್‌ ಬೇಗ್‌ ಅವರ ಪಾತ್ರ ಇದೆ ಎಂದು ಆರೋಪಿಸಿದ್ದಾರಲ್ಲಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಜವಾಬ್ದಾರಿಯುತ ಸ್ಥಾನದಲ್ಲಿರುವ ಶೋಭಾ ಅವರು ಇಂತಹ ಗಂಭೀರ ಆರೋಪ ಮಾಡುವ ಮೊದಲು ಬಹುಶಃ ಎಲ್ಲವನ್ನೂ ಪರಿಶೀಲಿಸಿ ಮಾತನಾಡಿದ್ದಾರೆ ಎಂದುಕೊಂಡಿದ್ದೇನೆ. ಆದರೆ, ರುದ್ರೇಶ್‌ ಕೊಲೆಯಲ್ಲಿ ರೋಷನ್‌ ಬೇಗ್‌ ಅವರ ಪಾತ್ರವಿಲ್ಲ ಎಂಬುದು ನಮ್ಮ ಇಲಾಖೆಯಿಂದ ಇರುವ ಸದ್ಯದ ಮಾಹಿತಿ. ಹಾಗಾಗಿ ಶೋಭಾ ಕರಂದ್ಲಾಜೆ ಅವರು ತಾವು ಮಾಡಿರುವ ಆರೋಪವನ್ನು ತಾವೇ ಸಾಬೀತುಪಡಿಸಬೇಕು. ತಮ್ಮ ಬಳಿ ಏನೆಲ್ಲಾ ಮಾಹಿತಿಗಳಿವೆಯೋ ಅವೆಲ್ಲವನ್ನೂ ಪೊಲೀಸ್‌ ಇಲಾಖೆಗೆ ನೀಡಬೇಕು. ಇಲ್ಲದಿದ್ದರೆ ಅವರೇ ತಪ್ಪಿತಸ್ಥರಾಗುತ್ತಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT