ಜಿ ಪರಮೇಶ್ವರ 
ರಾಜಕೀಯ

ರುದ್ರೇಶ್‌ ಕೊಲೆ ಪ್ರಕರಣದಲ್ಲಿ ರೋಷನ್ ಬೇಗ್‌ ಕೈವಾಡವಿಲ್ಲ: ಗೃಹ ಸಚಿವ ಪರಮೇಶ್ವರ

ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ನಗರಾಭಿವೃದ್ಧಿ ಮತ್ತು ಹಜ್‌ ಸಚಿವ ಆರ್‌. ರೋಷನ್‌ ಬೇಗ್‌ ಕೈವಾಡವಿದೆ...

ಬೆಂಗಳೂರು: ಆರ್‌ಎಸ್‌ಎಸ್‌ ಕಾರ್ಯಕರ್ತ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ನಗರಾಭಿವೃದ್ಧಿ ಮತ್ತು ಹಜ್‌ ಸಚಿವ ಆರ್‌. ರೋಷನ್‌ ಬೇಗ್‌ ಕೈವಾಡವಿದೆ ಎಂಬ ಮಾಜಿ ಸಚಿವೆ, ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಇದೊಂದು ಆಧಾರ ರಹಿತ ಆರೋಪ ಎಂದಿದ್ದಾರೆ. 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ನಮ್ಮ ಇಲಾಖೆಯಿಂದ ಬಂದಿರುವ ಸದ್ಯದ ಮಾಹಿತಿ ಪ್ರಕಾರ ರುದ್ರೇಶ್‌ ಕೊಲೆ ಪ್ರಕರಣದಲ್ಲಿ ರೋಷನ್‌ ಬೇಗ್‌ ಅವರ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ರೋಷನ್‌ ಬೇಗ್‌ ಅವರ ಪಾತ್ರ ಇದೆ ಎಂದು ಆರೋಪಿಸಿದ್ದಾರಲ್ಲಾ ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಜವಾಬ್ದಾರಿಯುತ ಸ್ಥಾನದಲ್ಲಿರುವ ಶೋಭಾ ಅವರು ಇಂತಹ ಗಂಭೀರ ಆರೋಪ ಮಾಡುವ ಮೊದಲು ಬಹುಶಃ ಎಲ್ಲವನ್ನೂ ಪರಿಶೀಲಿಸಿ ಮಾತನಾಡಿದ್ದಾರೆ ಎಂದುಕೊಂಡಿದ್ದೇನೆ. ಆದರೆ, ರುದ್ರೇಶ್‌ ಕೊಲೆಯಲ್ಲಿ ರೋಷನ್‌ ಬೇಗ್‌ ಅವರ ಪಾತ್ರವಿಲ್ಲ ಎಂಬುದು ನಮ್ಮ ಇಲಾಖೆಯಿಂದ ಇರುವ ಸದ್ಯದ ಮಾಹಿತಿ. ಹಾಗಾಗಿ ಶೋಭಾ ಕರಂದ್ಲಾಜೆ ಅವರು ತಾವು ಮಾಡಿರುವ ಆರೋಪವನ್ನು ತಾವೇ ಸಾಬೀತುಪಡಿಸಬೇಕು. ತಮ್ಮ ಬಳಿ ಏನೆಲ್ಲಾ ಮಾಹಿತಿಗಳಿವೆಯೋ ಅವೆಲ್ಲವನ್ನೂ ಪೊಲೀಸ್‌ ಇಲಾಖೆಗೆ ನೀಡಬೇಕು. ಇಲ್ಲದಿದ್ದರೆ ಅವರೇ ತಪ್ಪಿತಸ್ಥರಾಗುತ್ತಾರೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT