ಟಿಪ್ಪು ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ತಾವು ಇಂಥ ಜಾತಿಯಲ್ಲಿ ಹುಟ್ಟಬೇಕು ಯಾರು ಅರ್ಜಿ ಹಾಕಿರುವುದಿಲ್ಲ: ಸಿಎಂ

2012 ರಲ್ಲಿ ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ನಾಯಕರು, 2018ರ ಚುನಾವಣೆಯ ಮೇಲೆ ಕಣ್ಣಿಟ್ಟು ಈಗ ಅವನನ್ನು ವಿರೋಧಿಸುತ್ತಿದ್ದಾರೆ ...

ಬೆಂಗಳೂರು: 2012 ರಲ್ಲಿ ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ನಾಯಕರು, 2018ರ ಚುನಾವಣೆಯ ಮೇಲೆ ಕಣ್ಣಿಟ್ಟು ಈಗ ಅವನನ್ನು  ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಟಿಪ್ಪುಸುಲ್ತಾನ್‌ ಜಯಂತಿಯನ್ನು  ಉದ್ಘಾಟಿಸಿದ ಬಳಿಕ ಅವರು ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಟಿಪ್ಪು ಪೇಟ ಧರಿಸಿ, ಖಡ್ಗ ಹಿಡಿದಿದ್ದಿರಿ, ಈಗ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೇ 24 ಗಂಟೆಗಳಲ್ಲಿ ಟಿಪ್ಪು ಜಯಂತಿ ನಿಷೇಧಿಸುವುದಾಗಿ ಹೇಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಕರ್ನಾಟಕ ಗೆಜೆಟಿಯರ್‌ ಇಲಾಖೆ ಪ್ರಕಟಿಸಿರುವ ಟಿಪ್ಪು ಸುಲ್ತಾನ್‌ ಕುರಿತ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಟಿಪ್ಪುವನ್ನು ಹಾಡಿ ಹೊಗಳಿದ್ದರು. ಮುಖ್ಯಮಂತ್ರಿಯಾಗಿ ಹೊಗಳಿದ್ದವರಿಗೆ ಈಗ ಏನಾಗಿದೆ ಎಂದು ಕೇಳಿದ ಅವರು ಯಾವುದೇ ಸಮಾಜವನ್ನು ಓಲೈಸಲು ಟಿಪ್ಪು ಜಯಂತಿ ಆಚರಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮಹಾಪುರುಷರು ತಾವು ಇಂತ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ, ಸರ್ಕಾರ ಜಾತ್ಯಾತೀತವಾದದ್ದು. ಆರ್ ಎಸ್ಎಸ್ ಮತ್ತು ಬಿಜೆಪಿ ನಾಯಕರಿಗೆ ಸ್ವಲ್ಪ ಸೆನ್ಸ್ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT