ಟಿಪ್ಪು ಜಯಂತಿಯಲ್ಲಿ ಸಿಎಂ ಸಿದ್ದರಾಮಯ್ಯ 
ರಾಜಕೀಯ

ತಾವು ಇಂಥ ಜಾತಿಯಲ್ಲಿ ಹುಟ್ಟಬೇಕು ಯಾರು ಅರ್ಜಿ ಹಾಕಿರುವುದಿಲ್ಲ: ಸಿಎಂ

2012 ರಲ್ಲಿ ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ನಾಯಕರು, 2018ರ ಚುನಾವಣೆಯ ಮೇಲೆ ಕಣ್ಣಿಟ್ಟು ಈಗ ಅವನನ್ನು ವಿರೋಧಿಸುತ್ತಿದ್ದಾರೆ ...

ಬೆಂಗಳೂರು: 2012 ರಲ್ಲಿ ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ ಹೊಗಳಿದ ಬಿಜೆಪಿ ನಾಯಕರು, 2018ರ ಚುನಾವಣೆಯ ಮೇಲೆ ಕಣ್ಣಿಟ್ಟು ಈಗ ಅವನನ್ನು  ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಟಿಪ್ಪುಸುಲ್ತಾನ್‌ ಜಯಂತಿಯನ್ನು  ಉದ್ಘಾಟಿಸಿದ ಬಳಿಕ ಅವರು ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಟಿಪ್ಪು ಪೇಟ ಧರಿಸಿ, ಖಡ್ಗ ಹಿಡಿದಿದ್ದಿರಿ, ಈಗ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೇ 24 ಗಂಟೆಗಳಲ್ಲಿ ಟಿಪ್ಪು ಜಯಂತಿ ನಿಷೇಧಿಸುವುದಾಗಿ ಹೇಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಕರ್ನಾಟಕ ಗೆಜೆಟಿಯರ್‌ ಇಲಾಖೆ ಪ್ರಕಟಿಸಿರುವ ಟಿಪ್ಪು ಸುಲ್ತಾನ್‌ ಕುರಿತ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಟಿಪ್ಪುವನ್ನು ಹಾಡಿ ಹೊಗಳಿದ್ದರು. ಮುಖ್ಯಮಂತ್ರಿಯಾಗಿ ಹೊಗಳಿದ್ದವರಿಗೆ ಈಗ ಏನಾಗಿದೆ ಎಂದು ಕೇಳಿದ ಅವರು ಯಾವುದೇ ಸಮಾಜವನ್ನು ಓಲೈಸಲು ಟಿಪ್ಪು ಜಯಂತಿ ಆಚರಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

ಮಹಾಪುರುಷರು ತಾವು ಇಂತ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ, ಸರ್ಕಾರ ಜಾತ್ಯಾತೀತವಾದದ್ದು. ಆರ್ ಎಸ್ಎಸ್ ಮತ್ತು ಬಿಜೆಪಿ ನಾಯಕರಿಗೆ ಸ್ವಲ್ಪ ಸೆನ್ಸ್ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಧಾನಿ ಮೋದಿ ಬಳಿಕ ರಾಷ್ಟ್ರಪತಿಗಳ ಭೇಟಿಯಾದ ಅಮಿತ್ ಶಾ; ಹೆಚ್ಚಿದ ಕುತೂಹಲ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ?

ಶತಮಾನದ ಭೀಕರ ಭೂಕಂಪಕ್ಕೆ ನಲುಗಿದ Venezuela: 235 ಮಂದಿ ಸಾವು; ಸಾವಿರಾರು ಜನರು ನಾಪತ್ತೆ, ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ

ಯುದ್ಧದಲ್ಲೂ ಮಕ್ಕಳ ರಕ್ಷಣೆ ಅಗತ್ಯ, ಶಾಲೆಗಳ ಗುರಿಯಾಗಿಸುವವರ ವಿರುದ್ಧ ಇಡೀ ವಿಶ್ವ ಒಗ್ಗೂಡಲಿ: ವಿಶ್ವಸಂಸ್ಥೆಯಲ್ಲಿ ಭಾರತದ ಆಗ್ರಹ..!

'Happy Birthday... Please Resign'; ಧರ್ಮೇಂದ್ರ ಪ್ರಧಾನ್‌ಗೆ ವಿನೂತನವಾಗಿ ಶುಭ ಹಾರೈಸಿದ Cockroach Janta Party

RSS ಗಲಿಬಿಲಿಗೊಂಡರೆ BJP ಏಕೆ ಬುಸುಗುಡುತ್ತೆ: ಬಾಲ ಯಾರ ಕೈಯ್ಯಲ್ಲಿದೆ; ಪ್ರಿಯಾಂಕ್ ಖರ್ಗೆ ವಾಗ್ದಾಳಿ