ಜನಾರ್ದನ ರೆಡ್ಡಿ 
ರಾಜಕೀಯ

ಜನಾರ್ದನ ರೆಡ್ಡಿ ಮಗಳ ಮದುವೆಗೆ ಹೋಗೋದು ಬೇಡ: ರಾಜ್ಯ ಬಿಜೆಪಿಗೆ ಹೈಕಮಾಂಡ್ ಸೂಚನೆ

ರಾಜ್ಯ ಬಿಜೆಪಿ ನಾಯಕರು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಗಳ ವಿವಾಹಕ್ಕೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು...

ಬೆಂಗಳೂರು: ರಾಜ್ಯ ಬಿಜೆಪಿ ನಾಯಕರು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಗಳ ವಿವಾಹಕ್ಕೆ ಹೋಗುವುದು ಬೇಡ ಎಂದು ಬಿಜೆಪಿ ಹೈಕಮಾಂಡ್ ಸೂಚಿಸಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರ ಕಪ್ಪುಹಣದ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಸಮಯದಲ್ಲಿ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿಯ ಅದ್ಧೂರಿ ವಿವಾಹಕ್ಕೆ ಹೋಗುವುದು ಸರಿಯೇ ಎಂಬ ಮಾತುಗಳು ಕೇಳಿಬಂದಿದ್ದು, ಇದೀಗ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಮದುವೆಗೆ ಹೋಗದಂತೆ ಸೂಚಿಸಿದೆ.

ಜನಾರ್ದನ ರೆಡ್ಡಿ ಅವರು ತಮ್ಮ ಮಗಳ ವಿವಾಹಕ್ಕೆ ಕಪ್ಪುಹಣ ಬಳಕೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಸಹ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೆಡ್ಡಿ ಮದುವೆಯಲ್ಲಿ ಭಾಗವಹಿಸಿದಂತೆ ಫರ್ಮಾನು ಹೊರಡಿಸಿದೆಯಂತೆ.

ನವೆಂಬರ್ 15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬ್ರಹ್ಮಿಣಿ ಮದುವೆ ಅದ್ಧೂರಿಯಾಗಿ ನಡೆಯುತ್ತಿದ್ದು, ಮದುವೆ ಸುಮಾರು 500 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂಬ ಸುದ್ದಿಗಳು ವರದಿಯಾಗಿತ್ತು. ವಿವಾಹದ ಒಂದು ಲಗ್ನ ಪತ್ರಿಕೆಗೆ 2.50 ಲಕ್ಷ ರುಪಾಯಿ ವೆಚ್ಚ ಮಾಡಲಾಗಿತ್ತು ಎಂದು ಮಾದ್ಯಮಗಳು ವರದಿ ಮಾಡಿದ್ದವು. ಹೀಗೆ ಅದ್ಧೂರಿತನದಲ್ಲಿ ನಡೆಯುತ್ತಿರುವ ಮದುವೆಗೆ ಬಿಜೆಪಿ ನಾಯಕರು ಗೈರಾಗಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

SCROLL FOR NEXT