ಪ್ರಿಯಾಂಕ್ ಖರ್ಗೆ 
ರಾಜಕೀಯ

ಪರಿಷತ್ ಸಭಾಪತಿಗೆ ಕಿರಿಕಿರಿ ತಂದ ಪ್ರಿಯಾಂಕ್ ಖರ್ಗೆ ಉತ್ತರ

ಪ್ರಶ್ನೆಯೊಂದಕ್ಕೆ ಬೇಜವಾಬ್ದಾರಿ ಉತ್ತರ ನೀಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಗರಂ ಆದ ಘಟನೆ ...

ಬೆಳಗಾವಿ: ಪ್ರಶ್ನೆಯೊಂದಕ್ಕೆ ಬೇಜವಾಬ್ದಾರಿ ಉತ್ತರ ನೀಡಿದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ  ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಗರಂ ಆದ ಘಟನೆ ನಡೆಯಿತು.

ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಸರ್ಕಾರ ಭೂಮಿ ಗುರುತು ಮಾಡಿದೆಯೇ ಎಂದು ಬಿಜೆಪಿಯ ಮಹಾಂತೇಶ ಕವಟಗಿಮಠ ಪ್ರಶ್ನಿಸಿದರು. ಈ ಪ್ರಶ್ನೆಯನ್ನು  ಕೈಗಾರಿಕಾ ಇಲಾಖೆಗೆ ವರ್ಗಾಯಿಸಿರುವುದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಖರ್ಗೆ ಉತ್ತರದಿಂದ ಗುಡುಗಿದ ಸಭಾಪತಿ ಶಂಕರಮೂರ್ತಿ ರಾಜ್ಯ ಸರ್ಕಾರದ್ದೇ ಎರಡು ಇಲಾಖೆಗಳಿಗೆ ಬೇರೆ ಬೇರೆ ದೇಶದಲ್ಲಿ ಇರುವಷ್ಟು ಅಂತರವೇ? ಅಧಿಕಾರಿಗಳಿಗೆ ರಾಜ್ಯದ ಬಗ್ಗೆ ಕಾಳಜಿ ಇದೆಯೋ ಇಲ್ಲವೊ ಎಂದು ಗರಂ ಆಗಿ ಪ್ರಶ್ನಿಸಿದರು.

ಐಟಿ ಪಾರ್ಕ್ ನಲ್ಲಿ ಸೌಲಭ್ಯ ಒದಗಿಸುವ ಕಾರ್ಯ ಕೈಗಾರಿಕಾ ಇಲಾಖೆಗೆ ಸೇರಿದ್ದು. ಆದ್ದರಿಂದ ಪ್ರಶ್ನೆಯನ್ನು ಆ ಇಲಾಖೆಗೆ ವರ್ಗಾಯಿಸಲಾಗಿದೆ’ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ಐಎಎಸ್ ಅಧಿಕಾರಿಗಳನ್ನು ಸಮರ್ಥಿಸಿಕೊಳ್ಳದಂತೆ ಖರ್ಗೆಗೆ ಸಭಾಪತಿ ಸಲಹೆ ನೀಡಿದರು. ಎರಡು ಇಲಾಖೆಯ ಅಧಿಕಾರಿಗಳು ಚರ್ಚಿಸಿ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT