ಬಸವರಾಜ ರಾಯರೆಡ್ಡಿ 
ರಾಜಕೀಯ

ಶ್ರೀನಿವಾಸ್ ಪ್ರಸಾದ್ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ: ಸಚಿವ ರಾಯರೆಡ್ಡಿ

ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ...

ಕೊಪ್ಪಳ: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ರಾಜಿನಾಮೆಯಿಂದ ಕಾಂಗ್ರೆಸ್ ಗೆ ಯಾವುದೇ ನಷ್ಟವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಶನಿವಾರ ಹೇಳಿದ್ದಾರೆ.
ಇಂದು ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಯರೆಡ್ಡಿ, ಶ್ರೀನಿವಾಸ್ ಪ್ರಸಾದ್ ಅವರು ಅಧಿಕಾರಕ್ಕಾಗಿ ಪಕ್ಷದ ವಿರುದ್ಧ ಮಾತನಾಡಿದ್ದಾರೆ. ಆದರೆ ಅಧಿಕಾರಕ್ಕಾಗಿ ನಾವೂ ಎಂದೂ ಪಕ್ಷದ ವಿರುದ್ಧ ಮಾತನಾಡಿಲ್ಲ. ಸಚಿವ ಸ್ಥಾನಕ್ಕಾಗಿ ನಾವು ಮೂರು ವರ್ಷ ಕಾದಿದ್ದೇವೆ. ಸಚಿವರಾಗಲು ನಮಗೆ ಅರ್ಹತೆ ಇಲ್ಲವೇ ಎಂದು ಪ್ರಶ್ನಿಸಿದರು.
ಶ್ರೀನಿವಾಸ್ ಪ್ರಸಾದ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ತಪ್ಪಿಲ್ಲ. ಅವರ ರಾಜಿನಾಮೆಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಯಾವುದೇ ಹಾನಿಯಿಲ್ಲ ಎಂದರು.
ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸರಿ ಇಲ್ಲದಿದ್ದರೂ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿತ್ತು. ಮೂರು ವರ್ಷ ಮಂತ್ರಿಯಾಗಲು ಅವಕಾಶ ನೀಡಿದ್ದಕ್ಕಾಗಿ ಅವರು ಸಿಎಂ ಸಿದ್ದರಾಮಯ್ಯನವರಿಗೆ ಕೃತಜ್ಞರಾಗಿರಬೇಕಿತ್ತು. ಆದರೆ ತಮ್ಮ ಸ್ವಾರ್ಥಕ್ಕಾಗಿ ಪಕ್ಷದ ವಿರುದ್ಧ ಮಾತನಾಡುವುದು ಸರಿಯಲ್ಲ. ಮಂತ್ರಿಯಾಗುವುದು ಜನ್ಮಸಿದ್ಧ ಹಕ್ಕಲ್ಲ ಎಂದು ಸಚಿವ ರಾಯರೆಡ್ಡಿ ಮಾಜಿ ಸಚಿವನಿಗೆ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT