ಬಿ.ಎಸ್.ಯಡಿಯೂರಪ್ಪ 
ರಾಜಕೀಯ

ಸಿದ್ದರಾಮಯ್ಯ ಲಜ್ಜೆಗೆಟ್ಟ ಸಿಎಂ, ಇದು ಕೊಲೆಗಡುಕ ಸರ್ಕಾರ: ಬಿಎಸ್ ವೈ

ಸಿದ್ದರಾಮಯ್ಯ ಒಬ್ಬ ಲಜ್ಜೆಗೆಟ್ಟ ಮುಖ್ಯಮಂತ್ರಿ. ಅವರಿಗೆ ಕಿಂಚಿತ್ತೂ ಮಾನ ಮರ್ಯಾದೆ ಇಲ್ಲ ಎಂದು ಬುಧವಾರ...

ಬೆಂಗಳೂರು: ಸಿದ್ದರಾಮಯ್ಯ ಒಬ್ಬ ಲಜ್ಜೆಗೆಟ್ಟ ಮುಖ್ಯಮಂತ್ರಿ. ಅವರಿಗೆ ಕಿಂಚಿತ್ತೂ ಮಾನ ಮರ್ಯಾದೆ ಇಲ್ಲ ಎಂದು ಬುಧವಾರ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ. ಇದು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರಿಂದ ಸಾಬೀತಾಗಿದೆ. ಅವರು ಹೇಳಿರುವಂತೆ ಸಿದ್ದರಾಮಯ್ಯ ಕೈಬಿಸಿ ಮಾಡುವವರಿಗೆ ಮಾತ್ರ ಮಂತ್ರಿಗಿರಿ ನೀಡುತ್ತಾರೆ ಎಂದರು. ಅಲ್ಲದೆ ಒಂದೂವರೆ ವರ್ಷದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದಿಲ್ಲ ಎಂದರು.
ಬೆಂಗಳೂರಿನಲ್ಲಿ ನಡೆದ ಒಂಟಿ ಮಹಿಳೆಯರ ಹತ್ಯೆ ಪ್ರಕರಣಗಳನ್ನು ಪಟ್ಟಿ ಮಾಡುತ್ತೇವೆ. ರಾಜ್ಯ ಸರಕಾರ ಕರ್ನಾಟಕ ರಾಜ್ಯವನ್ನು ಕೇರಳ, ಬಿಹಾರ ಮಾಡಲು ಹೊರಟಿದೆ. ಇಂತಹ ಕೊಲೆಗಡುಕ ಸರಕಾರ ಅಧಿಕಾರದಲ್ಲಿರಬೇಕಾ ಎಂದು ಪ್ರಶ್ನಿಸಿದರು.
ಇದೇ ವೇಳೆ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಮಾಜಿ ಸಿಎಂ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT