ಡಿ.ಕೆ ಶಿವಕುಮಾರ್ 
ರಾಜಕೀಯ

ಸಮಸ್ಯೆ ಬಗೆಹರಿಸದಿದ್ರೆ ಪ್ಯಾಕ್ ಅಪ್ ಮಾಡಿಸ್ತೇನೆ: ಒಕ್ಕಲಿಗ ಸಂಘದ ಅಧ್ಯಕ್ಷ ಅಪ್ಪಾಜಿಗೌಡರಿಗೆ ಡಿಕೆಶಿ

ಒಕ್ಕಲಿಗರ ಸಂಘದಲ್ಲಿ ಮೂಡಿರುವ ಸಮಸ್ಯೆಯನ್ನು ಬಗೆಹರಿಸಬೇಕು, ಇಲ್ಲದಿದ್ದರೇ ಪ್ಯಾಕ್ ಅಪ್ ಮಾಡಿಸುವುದು ಹೇಗೆಂದು ನನಗೆ ಗೊತ್ತಿದೆ ಎಂದು ಇಂಧನ ಸಚಿವ...

ಬೆಂಗಳೂರು: ಒಕ್ಕಲಿಗರ ಸಂಘದಲ್ಲಿ ಮೂಡಿರುವ ಸಮಸ್ಯೆ ಬಗೆಹರಿಯದೆ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಘದ ಅಧ್ಯಕ್ಷದ ಬಗ್ಗೆ ಇಂಧನ ಸಚಿವ ಡಿ.ಕೆ ಶಿವಕುಮಾರ್  ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಶ್ರೀಗಂಧ ಕಾವಲ್ ನಲ್ಲಿ ನಡೆದ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಒಕ್ಕಲಿಗರ ಸಂಘದಲ್ಲಿ ಹಲವು ದಿನಗಳಿಂದ ಸಮಸ್ಯೆ ಉಂಟಾಗಿದೆ. ಸಂಘದ ಅಧ್ಯಕ್ಷರು ನಿರ್ದೇಶಕರು ಕುರ್ಚಿಗೆ ಅಂಟಿಕೊಂಡಿದ್ದಾರೆ. ಇದೆಲ್ಲಾವನ್ನು ಬಿಟ್ಟು ಸಮುದಾಯದ ಅಭಿವೃದ್ಧಿ ಕಡೆಗೆ ಗಮನ ನೀಡಬೇಕು ಎಂದು ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸಂಘದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸುವತ್ತ ಸಂಘದ ಅಧ್ಯಕ್ಷರು ಗಮನ ಹರಿಸಬೇಕು, ಸಮಸ್ಯೆ ಬಗೆಹರಿಸಲು ಸ್ವಾಮಿಜಿಗಳು ಮುಂದಾಗಬೇಕು ಎಂದು ನಿರ್ಮಲಾನಂದ ಸ್ವಾಮೀಜಿ ಬಳಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

(ಸೂಚನೆ: ಬೆಂಗಳೂರಿನ ಶ್ರೀಗಂಧ ಕಾವಲ್ ನಲ್ಲಿ ನಡೆದ ಆಸ್ಪತ್ರೆ ಉದ್ಘಾಟನೆ ಸಮಾರಂಭದ ಬಗ್ಗೆ ಕನ್ನಡಪ್ರಭ.ಕಾಂ ನಲ್ಲಿ ಪ್ರಕಟವಾಗಿದ್ದ ವರದಿಗೆ 'ಸಮಸ್ಯೆ ಬಗೆಹರಿಸದಿದ್ರೆ ಪ್ಯಾಕ್ ಅಪ್ ಮಾಡಿಸ್ತೇನೆ: ಆದಿ ಚುಂಚನಗಿರಿ ಶ್ರೀಗಳಿಗೆ ಡಿಕೆಶಿ ಧಮ್ಕಿ' ಎಂಬ ಶೀರ್ಷಿಕೆ ನೀಡಲಾಗಿತ್ತು. ಆದರೆ ಡಿ.ಕೆ ಶಿವಕುಮಾರ್ ಆದಿ ಚುಂಚನಗಿರಿಯ ಶ್ರೀಗಳಿಗೆ ಧಮ್ಕಿ ಹಾಕಿಲ್ಲವೆಂದು ತಿಳಿದುಬಂದಿದೆ.  ಶೀರ್ಷಿಕೆಯಿಂದ ಉಂಟಾಗಿದ್ದ ಗೊಂದಲಕ್ಕೆ ಕನ್ನಡಪ್ರಭ.ಕಾಂ ವಿಷಾದಿಸುತ್ತದೆ.)

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರಿಸಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT