ಜಿ ಪರಮೇಶ್ವರ್ 
ರಾಜಕೀಯ

ಕಾವೇರಿ ಗಲಾಟೆಯಲ್ಲಿ ಆರ್‏ಎಸ್ಎಸ್ ಕೈವಾಡದ ಶಂಕೆ; ತನಿಖೆಗೆ ಪ್ರತ್ಯೇಕ ತಂಡ: ಪರಮೇಶ್ವರ್

ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ಬೆಂಗಳೂರಂತು ಅಕ್ಷರಶಃ ಬೆಂಕಿಯ ಕೆನ್ನಾಲಿಗೆಗೆ ನಲುಗಿತ್ತು...

ಬೆಂಗಳೂರು: ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ಬೆಂಗಳೂರಂತು ಅಕ್ಷರಶಃ ಬೆಂಕಿಯ ಕೆನ್ನಾಲಿಗೆಗೆ ನಲುಗಿತ್ತು. ಈ ಗಲಾಟೆಯಿಂದೆ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಕೈವಾಡವಿರುವ ಅನುಮಾನವಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಕೆಪಿಸಿಸಿ ಪದಾಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪರಮೇಶ್ವರ್ ಅವರು, ಕಾವೇರಿ ಕಿಚ್ಚು ಬೆಂಗಳೂರಿನಲ್ಲಿ ಹಿಂಸಾಚಾರ ರೂಪ ಪಡೆದಿದ್ದು, ಇದರ ಹಿಂದೆ ಆರ್ಎಸ್ಎಸ್ ಕೈವಾಡವಿರುವ ಶಂಕೆ ಇದ್ದು ಇದಕ್ಕಾಗಿ ಪ್ರತ್ಯೇಕ ತನಿಖೆ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. 
ಬೆಂಗಳೂರಿನ ಪ್ರತಿಭಟನೆ ಕಾವು ಹಿಂಸಾಚಾರ ರೂಪ ಪಡೆದಿದ್ದು, ಪ್ರತಿಭಟನಾಕಾರು ಸುಮಾರು 70 ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಇನ್ನು ಉದ್ರಿಕ್ತರನ್ನು ಚದುರಿಸಲು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಲಾಠಿ ಚಾರ್ಚ್ ವೇಳೆ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT