ಬಸವರಾಜ್ ರಾಯರೆಡ್ಡಿ 
ರಾಜಕೀಯ

ಕಾವೇರಿ ಗಲಾಟೆಯಲ್ಲಿ ಆರ್ಎಸ್ಎಸ್ ಕೈವಾಡ: ಪರಂ ಹೇಳಿಕೆಗೆ ರಾಯರೆಡ್ಡಿ ಸಮರ್ಥನೆ

ಕಳೆದ ಸೋಮವಾರ ನಡೆದ ಕಾವೇರಿ ಗಲಾಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಪಾತ್ರ ಇದೆ ಎಂಬ ಗೃಹ ಸಚಿವ ಪರಮೇಶ್ವರ...

ಬೆಂಗಳೂರು: ಕಳೆದ ಸೋಮವಾರ ನಡೆದ ಕಾವೇರಿ ಗಲಾಟೆಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್) ಪಾತ್ರ ಇದೆ ಎಂಬ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ.
ಪರಮೇಶ್ವರ ಅವರು ಆಧಾರ ಇಲ್ಲದೆ ಯಾವುದೇ ಹೇಳಿಕೆಯನ್ನು ನೀಡುವುದಿಲ್ಲ. ಈ ಸಂಬಂಧ ಅವರಿಗೆ ಗುಪ್ತಚರ ಇಲಾಖೆಯಿಂದ ವರದಿ ಬಂದಿದೆ ಎಂದು ರಾಯರೆಡ್ಡಿ ಅವರು ತಿಳಿಸಿದ್ದಾರೆ.
ಕಾವೇರಿ ವಿಚಾರವಾಗಿ ಕಳೆದ ಸೋಮವಾರ ರಾಜ್ಯಾದ್ಯಂತ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿತ್ತು. ಬೆಂಗಳೂರಂತು ಅಕ್ಷರಶಃ ಬೆಂಕಿಯ ಕೆನ್ನಾಲಿಗೆಗೆ ನಲುಗಿತ್ತು. ಈ ಗಲಾಟೆಯಿಂದೆ ಆರ್‌ಎಸ್‌ಎಸ್ ಕೈವಾಡವಿರುವ ಅನುಮಾನವಿದೆ ಎಂದು ಪರಮೇಶ್ವರ್ ಹೇಳಿದ್ದರು.
ಪರಮೇಶ್ವರ ಅವರ ಈ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು, ಗೃಹ ಸಚಿವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಈ ರೀತಿ ಆರೋಪಿಸುತ್ತಿದ್ದಾರೆ ಎಂದಿದ್ದಾರೆ. ಅಲ್ಲದೆ ಈ ಕೂಡಲೇ ಅವರು ಆರ್ಎಸ್ಎಸ್ ಕ್ಷಮೆಯಾಚಿಸಬೇಕು ಎಂದು ಶೆಟ್ಟರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT