ಜನಾರ್ದನ ಪೂಜಾರಿ 
ರಾಜಕೀಯ

ಸಂಪುಟಕ್ಕೆ ಮತ್ತೆ ಜಾರ್ಜ್ ಬಂದರೆ ಕಾಂಗ್ರೆಸ್ ಸರ್ವನಾಶ: ಜನಾರ್ದನ ಪೂಜಾರಿ

ಕೆ.ಜೆ. ಜಾರ್ಜ್‌ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಂಡರೆ ರಾಜ್ಯ ಕಾಂಗ್ರೆಸ್‌ ಸರ್ವನಾಶ ಆಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ...

ಮಂಗಳೂರು: ಕೆ.ಜೆ. ಜಾರ್ಜ್‌ ಅವರನ್ನು ಮತ್ತೆ ಸಂಪುಟಕ್ಕೆ ತೆಗೆದುಕೊಂಡರೆ ರಾಜ್ಯ ಕಾಂಗ್ರೆಸ್‌ ಸರ್ವನಾಶ ಆಗಲಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ನಾಶವಾದರೆ ಮತ್ತೆ ಕಾಂಗ್ರೆಸನ್ನು ಬದುಕಿಸಲು ಸಾಧ್ಯವಿಲ್ಲ. ನಾನು ಈ ಹಿಂದೆ ಹೇಳಿದಂತೆ ಸಿಐಡಿ ರಿಪೋರ್ಟ್‌ ನೀಡಿದೆ. ಪ್ರಕರಣವನ್ನು ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಿಐಡಿಗೆ ನೀಡುವ ಮೂಲಕ ಸಿಎಂ ಅವರು ಜಾರ್ಜ್‌ರನ್ನು ಬದುಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗಣಪತಿ ಡೆತ್‌ನೋಟ್‌ನಲ್ಲಿ ಜಾರ್ಜ್‌ ಸೇರಿದಂತೆ ಇಬ್ಬರು ಅಧಿಕಾರಿಗಳ ಹೆಸರು ಹೇಳಿದ್ದಾರೆ. ಡೆತ್‌ನೋಟ್‌ಗೆ ಕೋರ್ಟ್‌ ಮಹತ್ವ ನೀಡುತ್ತದೆ ಹೀಗಾಗಿ ಸುಪ್ರೀಂ ಕೋರ್ಟ್‌ಗೆ  ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಇನ್ನೂ ಉಡುಪಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುತ್ತಿರುವ ಜನಾರ್ದನ ಪೂಜಾರಿ ವಿರುದ್ಧ ಪಕ್ಷ ಶಿಸ್ತು ಕ್ರಮ ಜರಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜಾರ್ಜ್ ವಿರುದ್ಧ ಹೇಳಿಕೆ ನೀಡಿರುವ ಪೂಜಾರಿ ಪಕ್ಷ ಮುಜುಗರಕ್ಕೀಡಾಗುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT