ಸಾಂದರ್ಭಿಕ ಚಿತ್ರ 
ರಾಜಕೀಯ

ತುರ್ತು ಅಧಿವೇಶನ: ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿ

ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಆದೇಶ ಪಾಲಿಸಲು ಸಾಧ್ಯವಾಗದ...

ಬೆಂಗಳೂರು: ತಮಿಳುನಾಡಿಗೆ ಮತ್ತೆ 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿರುವ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಶುಕ್ರವಾರ ವಿಧಾನ ಮಂಡಲದ ತುರ್ತು ಅಧಿವೇಶನ ಕರೆದಿದ್ದು, ಈ ಅಧಿವೇಶನದಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ಮತ್ತು ವಿಧಾನ ಪರಿಷತ್ ಸದಸ್ಯರಿಗೆ ಗುರುವಾರ ವಿಪ್ ಜಾರಿ ಮಾಡಲಾಗಿದೆ.
ನಾಳೆ ಕಡ್ಡಾಯವಾಗಿ ಅಧಿವೇಶನದಲ್ಲಿ ಹಾಜರಿರುವಂತೆ ಕಾಂಗ್ರೆಸ್ ಶಾಸಕರಿಗೆ ರಾಜ್ಯ ಸರ್ಕಾರದ ಮುಖ್ಯ ಸಚೇತಕ ಪಿ.ಎಂ.ಅಶೋಕ್ ಅವರು ಇಂದು ವಿಪ್ ಜಾರಿ ಮಾಡಿದ್ದಾರೆ.
ಇನ್ನು ವಿಧಾನ ಪರಿಷತ್ ಸದಸ್ಯರಿಗೂ ಸದನಕ್ಕೆ ಹಾಜರಾಗುವಂತೆ ಪರಿಷತ್ ಸಚೇತಕ ಐವನ್ ಡಿಸೋಜಾ ಅವರು ವಿಪ್ ಜಾರಿಗೊಳಿಸಿದ್ದಾರೆ.
ಈಗಾಗಲೇ ತಮಿಳುನಾಡಿಗೆ ನೀರು ಬಿಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ನೀರು ಬಿಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಸಾಧ್ಯವಿಲ್ಲ ಎಂಬ ಸರ್ವಾನುಮತದ ನಿರ್ಣಯವನ್ನು ಅಧಿವೇಶನದಲ್ಲಿ ಕೈಗೊಂಡರೆ ಸುಪ್ರೀಂ ಕೋರ್ಟ್ ಅದನ್ನು ಪ್ರಶ್ನಿಸಲು ಸಾಧ್ಯವಾಗುವುದಿಲ್ಲ. ಈ ಅವಕಾಶವನ್ನು ಬಳಸಿಕೊಳ್ಳಲು ಸರ್ಕಾರ ವಿಶೇಷ ಅಧಿವೇಶನ ಕರೆದಿದೆ.
ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ತಲುಪಿದ್ದು, ಇಂತಹ ಸ್ಥಿತಿಯಲ್ಲೂ  ಕರ್ನಾಟಕ ತಮಿಳುನಾಡಿಗೆ ಸೆ.27 ವರೆಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್ ನೀರಿನಂತೆ ಒಟ್ಟು 42 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT