ಅಂಬರೀಷ್ 
ರಾಜಕೀಯ

ಸಿಎಂ ಜೊತೆ ಮುನಿಸು: ಇಂದಿನ ಸರ್ವಪಕ್ಷ ಸಭೆಗೂ ಅಂಬರೀಷ್ ಗೈರು

ಪದೇ ಪದೇ ಸುಪ್ರೀಂ ಕೋರ್ಟ್ ರಾಜ್ಯದ ವಿರುದ್ಧವಾಗಿಯೇ ತೀರ್ಪು ನೀಡುತ್ತಿದೆ. ಇಷ್ಟಾದರೂ ಮಂಡ್ಯ ಜನರ ಹೋರಾಟಕ್ಕೆ ಸಾಥ್ ನೀಡುವ ಕನಿಷ್ಠ ಪ್ರಯತ್ನ ಮಾಡದ ಮಾಜಿ ಸಚಿವ ಹಾಗೂ ನಟ ಅಂಬರೀಷ್...

ಬೆಂಗಳೂರು: ಕಾವೇರಿ ನೀರಿಗಾಗಿ ಜನರು ಬೀದಿಗಿಳಿದಿದ್ದಾರೆ. ಸತತವಾಗಿ ಹೋರಾಟಗಳು ನಡೆಯುತ್ತಿವೆ. ಪದೇ ಪದೇ ಸುಪ್ರೀಂ ಕೋರ್ಟ್ ರಾಜ್ಯದ ವಿರುದ್ಧವಾಗಿಯೇ ತೀರ್ಪು ನೀಡುತ್ತಿದೆ. ಇಷ್ಟಾದರೂ ಮಂಡ್ಯ ಜನರ ಹೋರಾಟಕ್ಕೆ ಸಾಥ್ ನೀಡುವ ಕನಿಷ್ಠ ಪ್ರಯತ್ನ ಮಾಡದ ಮಾಜಿ ಸಚಿವ ಹಾಗೂ ನಟ ಅಂಬರೀಷ್ ಇಂದು ನಡೆದ ಸರ್ವ ಪಕ್ಷ ಸಭೆಗೂ ಗೈರಾಗಿದ್ದಾರೆ.

ತಮ್ಮನ್ನು ಸಂಪುಟದಿಂದ ತೆಗೆದು ಹಾಕಿದ ನಂತರ ಸಿಎಂ ಜೊತೆ ಮುನಿಸಿಕೊಂಡಂತಿರುವ ಅಂಬರೀಷ್ ಮಂಡ್ಯ ಜಿಲ್ಲೆಯ ರೈತರ ಕಷ್ಟಗಳಿಗಿಂತ ಸಿದ್ದರಾಮಯ್ಯ ಅವರ ವಿರುದ್ಧದ ಕೋಪವೇ ಹೆಚ್ಚಾಯಿತು ಎಂಬಂತೆ ನಡೆದುಕೊಳ್ಳುತ್ತಿದ್ದಾರೆ.  

ಅದೆಲ್ಲಾ ಇರಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಕುರಿತು ಕರೆದಿರುವ ಸರ್ವಪಕ್ಷ ಸಭೆಯಿಂದಲೂ ದೂರ ಉಳಿದಿದ್ದಾರೆ. ಕಾವೇರಿಗೆ ಸಂಬಂಧಪಟ್ಟಂತೆ ಇಂದು ನಾಲ್ಕನೇ ಸರ್ವಪಕ್ಷ ಸಭೆ ನಡೆಯಿತು. ಈವೆರೆಗಿನ ನಾಲ್ಕೂ ಸಭೆಗಳಿಗೂ ಅಂಬರೀಷ್ ಗೈರಾಗಿದ್ದು, ತವರಿನ ಹಿತ ಕಾಯುವ ಪ್ರಯತ್ನದಿಂದ ದೂರ ಉಳಿದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT