ಸುರೇಶ್ ಕುಮಾರ್ 
ರಾಜಕೀಯ

ಉಪಚುನಾವಣೆ ಪ್ರಚಾರ: ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡಿದ ಬಿಜೆಪಿ ಶಾಸಕ

ಉಪ ಚುನಾವಣೆ ಪ್ರಚಾರಕ್ಕೆ ಮೈಸೂರಿಗೆ ತೆರಳಿರುವ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಮ್ಮ ಸ್ನೇಹಿತನ ದನದ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡುವ ಮೂಲಕ...

ಮೈಸೂರು: ಉಪ ಚುನಾವಣೆ ಪ್ರಚಾರಕ್ಕೆ ಮೈಸೂರಿಗೆ ತೆರಳಿರುವ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್  ತಮ್ಮ ಸ್ನೇಹಿತನ ದನದ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ಅಲಂಬೂರು ಮುಂಟಿ ಗ್ರಾಮದಲ್ಲಿ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರಿಗೆ ಸೇರಿದ ದಮದ ಕೊಟ್ಟಿಗೆಯಲ್ಲಿ  ಕಳೆದ ನಾಲ್ಕು ದಿನಗಳಿಂದ ವಾಸ್ತವ್ ಹೂಡಿದ್ದಾರೆ.

ರಾತ್ರಿ ಉಳಿದಿರುವುದು ನಾವೇ ತೀರ್ಮಾನ ಮಾಡಿ ಆರಿಸಿಕೊಂಡಿರುವ (ಯಾವುದೇ ಪಂಚತಾರಾ ಹೋಟೆಲ್ ಗೆ ಕಡಿಮೆ ಇಲ್ಲದ) ಖುಷಿ ತಂದ ಗದ್ದೆಯ ವಾತಾವರಣದಲ್ಲಿ. ಒಳ್ಳೆಯ ಗಾಳಿ ನಮ್ಮ ಪಾಲಿಗೆ ದೊರಕುತ್ತಿರುವುದು ಇನ್ನಷ್ಟು ಸಂತಸ ತಂದಿದೆ.

ರಾತ್ರಿ ಮಲಗುತ್ತಿರುವುದು ಗೆಳೆಯ ಕಪಿಲೇಶ್ ರವರ ಆಲಂಬೂರು ಮುಂಟಿ ಗ್ರಾಮದ ಗದ್ದೆಯಲ್ಲಿರುವ ದನದ ಕೊಟ್ಟಿಗೆಯಲ್ಲಿ. ಸ್ನಾನಕ್ಕೆ ಗದ್ದೆಯ ಬೋರ್ ವೆಲ್ ನೀರು.

ಬೆಳಿಗ್ಗೆಯಿಂದ ಓಡಾಡಿ ಸುಸ್ತಾಗುವ ದೇಹಕ್ಕೆ ಅತ್ಯಂತ ಸುಖಕರ ನಿದ್ದೆಯನ್ನು ದಯಪಾಲಿಸಿರುವ ಈ ವಾತಾವರಣಕ್ಕೆ ಧನ್ಯೋಸ್ಮಿ ಎಂದು ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Southern Zonal Council meet: ಜಲ ವಿವಾದಗಳ ಕುರಿತು ಮಾತುಕತೆಗೆ ಅಮಿತ್ ಶಾ ಕರೆಗೆ ರಾಜ್ಯಗಳ ಬೆಂಬಲ

ಕೇಂದ್ರದಿಂದ ಮಹತ್ವದ ನಿರ್ಧಾರ: ಲಡಾಖ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಪೀಠ ಸ್ಥಾಪನೆ

J&K ಭಾರತದ ಅವಿಭಾಜ್ಯ ಅಂಗ: ಅಮೆರಿಕ ರಾಯಭಾರಿಗೆ ಪಾಕ್ ಸಮನ್ಸ್; ಅದು ಅವರ ವಿಷಯ- ಸಿಎಂ ಒಮರ್ ಅಬ್ದುಲ್ಲಾ

ತಂದೆ ಮನೆಗೆ ಹೋಗೋದಿದ್ರೆ ಕದ್ದುಮುಚ್ಚಿ ಹೋಗ್ಬೇಕಿತ್ತ?: ಮೇಘ ನಾಯರ್ ಮೊದಲ ಪ್ರತಿಕ್ರಿಯೆ ಬೆನ್ನಲ್ಲೇ ನೆಟ್ಟಿಗರ ಪ್ರಶ್ನೆ

Delimitation ಬೇಡ್ವೇ ಬೇಡ ಎನ್ನುತ್ತಿದ್ದ ತಮಿಳುನಾಡು ಸಿಎಂ ವಿಜಯ್ ನಿಲುವಲ್ಲಿ ದಿಢೀರ್ ಬದಲಾವಣೆ: ಅಮಿತ್ ಶಾ ಜೊತೆಗಿನ ಸಭೆಯಲ್ಲಿ ಹೇಳಿದ್ದೇನು?