ಪ್ರಚಾರದಲ್ಲಿ ತೊಡಗಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ ತಂತ್ರಗಾರಿಕೆ ರಾಜ್ಯದಲ್ಲಿ ನಡೆಯಲ್ಲ: ಸಿಎಂ ಸಿದ್ದರಾಮಯ್ಯ

2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೇಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಅದಕ್ಕಾಗಿ ಈಗಾಗಲೇ ...

ಮೈಸೂರು: 2018ರ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೇಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಅದಕ್ಕಾಗಿ ಈಗಾಗಲೇ ತಯಾರಿ ನಡೆಸಿದ್ದಾರೆ. 
ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿರುವ ಅವರು ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನವನ್ನು ಒರೆಗೆ ಹಚ್ಚಿದ್ದಾರೆ. ತಮ್ಮ ಅಭಿವೃದ್ಧಿ ಕೆಲಸಗಳ ಬಗ್ಗೆ ಭರವಸೆಯಿದ್ದು, ಅವು ತಮ್ಮನ್ನು ಕೈಹಿಡಿಯುತ್ತದೆ ಎಂಬು ಆತ್ಮವಿಶ್ವಾಸದಲ್ಲಿದ್ದಾರೆ.  ಪಾರದರ್ಶಕ ಆಡಳಿತ, ಬಸವಣ್ಣನವರ ಆದರ್ಶದಂತೆ ಎಲ್ಲರಿಗೂ ಸಾಮಾಜಿಕ ನ್ಯಾಯ ನೀಡಲು ಸರ್ಕಾರ ಬದ್ಧವಾಗಿದ್ದು, 2018 ರಲ್ಲಿ ಅಧಿಕಾರಕ್ಕೇರಬೇಕೆಂಬ ಬಿಜೆಪಿ ಕನಸು ನುಚ್ಚು ನೂರಾಗಲಿದೆ ಎಂದು ಅವರು ಹೇಳಿದ್ದಾರೆ. 
ಸದ್ಯ ಗುಂಡ್ಲಪೇಟೆ ಮತ್ತು ನಂಜನಗೂಡು ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಸಿಎಂ ತೊಡಗಿಸಿಕೊಂಡಿದ್ದಾರೆ. ಗುಂಡ್ಲುಪೇಟೆಯ ತೆರಕನಂಬಿಯಲ್ಲಿ ಚುನಾವಣಾ ಪ್ರಚಾರದ ನಂತರ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಅವರು, 2018ರ ವಿಧಾನ ಸಭೆ ಚುನಾವಣೆಗಾಗಿ ತಾವು ರೂಪಿಸುತ್ತಿರುವ ತಂತ್ರಗಾರಿಕೆ ಬಗ್ಗೆ ವಿವರ ನೀಡಿದರು. ಚುನಾವಣೆಗೆ ಆರು ತಿಂಗಳು ಇರುವ ವೇಳೆ ಪ್ರಚಾರ ಆರಂಭಿಸುವುದಾಗಿ ತಿಳಿಸಿದ್ದಾರೆ. 
ಉತ್ತರ ಪ್ರದೇಶ ಚುನಾವಣೆ ಗೆಲುವಿನ ಬಳಿಕ ಬಿಜೆಪಿ ಬೀಗುತ್ತಿದೆ. ಆದರೆ ಕರ್ನಾಟಕದಲ್ಲಿ ಬಿಜೆಪಿ ತಂತ್ರಗಾರಿಕೆ ಪ್ರಯೋಜನಕ್ಕೆ ಬಾರದು. ಕನ್ನಡಿಗರು ಯಾವಾಗಲು ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡುತ್ತಾರೆ ಎಂದು ಸಿಎಂ ತಿಳಿಸಿದ್ದಾರೆ.
ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಗೊಳ್ಳಲು ತಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ, ಆದರೆ ಇದು ಕೇವಲ ಜನರಲ್ಲಿ ಗೊಂದಲ ಸೃಷ್ಟಿಸಲು ನೀಡುತ್ತಿರುವ ಹೇಳಿಕೆಗಳಾಗಿವೆ ಎಂದು ಟೀಕಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT