ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಆತ್ಮಹತ್ಯೆಗೆ ಶರಣಾದ ರೈತನ ಕುಟುಂಬಕ್ಕೆ 1 ಲಕ್ಷ ರುಪಾಯಿ ಪರಿಹಾರ ನೀಡಿದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಆರೋಪದ ಮೇಲೆ ಮಾಜಿ ಸಚಿವ ಎಂ.ಪಿ.ರೇಎಂ.ಪಿ.ರೇಣುಕಾಚಾರ್ಯ ಅವರ ವಿರುದ್ಧ ಕಾಂಗ್ರೆಸ್ ಶನಿವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಯಡಿಯೂರಪ್ಪ ಅವರು ಹೊಸಹಳ್ಳಿ ಗ್ರಾಮದಲ್ಲಿ ಸಾಲಭಾದೆ ಯಿಂದ ಆತ್ಮಹತ್ಯೆಗೆ ಶರಣಾದ ರೈತ ಚಿಕ್ಕಶೆಟ್ಟಿ ವಡ್ಡರ ಕುಟುಂಬಕ್ಕೆ 1 ಲಕ್ಷ ರುಪಾಯಿ ಪರಿಹಾರದ ಹಣ ನೀಡಿರುವ ವಿಡಿಯೋವೊಂದು ಬಹಿರಂಗಗೊಂಡಿದ್ದು, ಇದನ್ನು ಆಧರಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಬಿಜೆಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಇನ್ನು ನಿನ್ನೆ ಸಂಜೆ ರೇಣಕಾಚಾರ್ಯ ಅವರ ಸ್ಕಾರ್ಪಿಯೋ ವಾಹನದಲ್ಲಿ 2 ಲಕ್ಷಕ್ಕು ಹೆಚ್ಚು ಹಣ ಪತ್ತೆಯಾಗಿದ್ದು, ಮಾಜಿ ಸಚಿವನ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರು ನೀಡಿದೆ.
ರೇಣುಕಾಚಾರ್ಯ ಅವರು ಗುಂಡ್ಲುಪೇಟೆಯಿಂದ ನಂಜನಗೂಡಿನತ್ತ ತೆರಳುತ್ತಿದ್ದ ವೇಳೆ ಪೊಲೀಸರು ಬೇಗೂರು ಚೆಕ್ ಪೊಸ್ಟ್ ಬಳಿ ಕಾರು ತಪಾಸಣೆ ನಡೆಸಿದ್ದು, ಈ ವೇಳೆ ಮಾಜಿ ಸಚಿವನ ಕಾರಿನಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos