ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಹಾಕಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು: ಎಚ್.ಡಿ.ಕುಮಾರಸ್ವಾಮಿ

ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಳಿದಿದ್ದರೇ ಫಲಿತಾಂಶ ಬೇರೆಯೇ ಇರುತ್ತಿತ್ತು ಎಂದು ಮಾಜಿ ಸಿಎಂ...

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಗಳಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಳಿದಿದ್ದರೇ ಫಲಿತಾಂಶ ಬೇರೆಯೇ ಇರುತ್ತಿತ್ತು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಎರಡು ಕ್ಷೇತ್ರಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು ಉಪಚುನಾವಣೆ ಫಲಿತಾಂಶದಿಂದ ಯಾರು ಹಿಗ್ಗಿ ಮೇಲೇರಬೇಕಿಲ್ಲ. ಕುಗ್ಗಿ ಕೆಳಗಿಳಿಯಬೇಕಿಲ್ಲ. ನಾವು ನಂಜನಗೂಡಿನಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ. 
ನಮ್ಮಿಂದ ಕಾಂಗ್ರೆಸ್ ಗೆದ್ದಿಲ್ಲ. ನಾವು ಅಭ್ಯರ್ಥಿ ಹಾಕದೆ ಇರೋದು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿರಬಹುದು.ಕರ್ನಾಟಕ ಉತ್ತರ ಪ್ರದೇಶ ಅಲ್ಲ. ಬಿಜೆಪಿ ಕರ್ನಾಟಕದಲ್ಲಿ ಏಕಾಂಗಿಯಾಗಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲ. ಬಿಜೆಪಿಯ ಮಿಷನ್ 150 ಕನಸಿನ ಮಾತು. ಹಿಂದೆ ಒಂದು ಬಾರಿ ಕೊಟ್ಟ ಅವಕಾಶದಲ್ಲಿ ಅವರು ಏನೇನೆಲ್ಲಾ ಮಾಡಿದ್ದಾರೆ ಅನ್ನೋದು ಜನಕ್ಕೆ ಗೊತ್ತು. ಕಳೆದ ಸಾರಿ ಗೆದ್ದ 108 ಸ್ಥಾನವೇ ಅವರ ದೊಡ್ಡ ಸಾಧನೆ ಎಂದು ಲೇವಡಿ ಮಾಡಿದರು.
ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT