ಸಿದ್ದರಾಮಯ್ಯ 
ರಾಜಕೀಯ

ಕೆಪಿಸಿಸಿಗೆ ಅಧ್ಯಕ್ಷರ ನೇಮಕ: ಶೀಘ್ರದಲ್ಲೇ ಸೋನಿಯಾ ನಿರ್ಧಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವೇ ತಮ್ಮ ನಿರ್ಧಾರ ...

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆಗೆ ನೇಮಕ ಸಂಬಂಧ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಶೀಘ್ರವೇ ತಮ್ಮ ನಿರ್ಧಾರ ತಿಳಿಸಲಿದ್ದಾರೆ.
ಉಪ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೈಕಮಾಂಡ್ ಭೇಟಿ ಮಾಡಿ, ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಿದರು.
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜೊತೆಗೂಡಿ ಸಿದ್ದರಾಮಯ್ಯ ಹೈ ಕಮಾಂಡ್ ಭೇಟಿ ಮಾಡಿ ಚರ್ಚಿಸಿದ್ದಾರೆ. 
ವಿಧಾನ ಪರಿಷತ್‌ಗೆ ನಾಮನಿರ್ದೇಶನ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ. 
ಜಿ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಿದ್ದಾರೆ, ಜೊತೆಗೆ ಗೃಹಖಾತೆಯು ಅವರ ಬಳಿಯಿದೆ.  ಹಾಗಾಗಿ ಅವರನ್ನು ಬದಲಿಸಿ ಹೊಸಬರನ್ನು ನೇಮಿಸಬೇಕೆಂದು ಸಿದ್ದರಾಮಯ್ಯ ಹೈ ಕಮಾಂಡ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ, ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿ ಇದ್ದು, ಭರ್ತಿ ಮಾಡುವ ಕುರಿತು ಈಗ ಪ್ರಸ್ತಾಪಿಸಲಾಗಿಲ್ಲ. ಮುಂದಿನ ತಿಂಗಳು ಈ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿದು ಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT