ಬಸವರಾಜ್ ರಾಯರೆಡ್ಡಿ 
ರಾಜಕೀಯ

'ಮೋದಿಗೆ ಅಧಿಕಾರ ಬೇಕು ಅಂದ್ರೆ ಸಾಯಲಿ ಬಿಡಿ': ಕೆಂಪು ದೀಪ ನಿಷೇಧದ ಪ್ರಶ್ನೆಗೆ ಸಚಿವ ಬಸವರಾಜ್ ರಾಯರೆಡ್ಡಿ ಉತ್ತರ

ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಕೆಂಪು ದೀಪ ತೆಗೆದ್ರೆ ಸಾಕಾಗಲ್ಲ, ಅವರು ಭದ್ರತೆಯನ್ನೂ ತ್ಯಜಿಸಲಿ ಎಂದು ಉನ್ನತ ಶಿಕ್ಷಣ ಸಚಿವ....

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಕೆಂಪು ದೀಪ ತೆಗೆದ್ರೆ ಸಾಕಾಗಲ್ಲ, ಅವರು ಭದ್ರತೆಯನ್ನೂ ತ್ಯಜಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಅವರು ಶುಕ್ರವಾರ ಪ್ರಧಾನಿಗೆ ಸವಾಲು ಹಾಕಿದ್ದಾರೆ.
ಇಂದು ಕೇಂದ್ರ ಸರ್ಕಾರ ಗಣ್ಯರ ಕಾರಿನ ಮೇಲೆ ಕೆಂಪು ದೀಪ ನಿಷೇಧಿಸಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ರಾಯರೆಡ್ಡಿ ಅವರು, ಕೆಂಪು ದೀಪ ತೆಗೆದು ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ. ಮೋದಿ ಅವರು ಮೊದಲು ಭದ್ರತೆಯನ್ನು ತೆಗೆದು ಹಾಕಲಿ. ತಮ್ಮದೂ ತೆಗೆದು ಹಾಕಲಿ ಎಂದರು.
ಈ ವೇಳೆ ಮೋದಿಯವರಿಗೆ ಜೀವ ಬೆದರಿಕೆ ಇದೆ. ಹೀಗಾಗಿ ಭದ್ರತೆ ತೆಗೆಯಲು ಹೇಗೆ ಸಾಧ್ಯ ಎಂಬ ವರದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು. ಅಧಿಕಾರ ಬೇಕು ಅಂದ್ರೆ ಸಾಯಲಿ ಬಿಡಿ. ಅಧಿಕಾರ ಬೇಕಾದ್ರೆ ಸಾಯಬೇಕಪ್ಪ. ಯಾರೇನು ಮಾಡಕ್ಕಾಗುತ್ತೆ ಅದಕ್ಕೆ? ಅಧಿಕಾರ ಬೇಡ ಅಂದ್ರೆ ಮನೆಯಲ್ಲಿ ಕುಳಿತುಕೊಳ್ಳಲಿ. ಆಗ ಯಾರು ಅವರನ್ನು ಸಾಯಿಸಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ರಾಯರೆಡ್ಡಿ, ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ. ನನಗೆ ಆ ಸ್ಥಾನ ನೀಡಿದರೂ ನಿಭಾಯಿಸಲು ನಾನು ಸಿದ್ಧ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ; ಬಹುಮಾನ ಘೋಷಣೆ

ಚುನಾವಣೆಗೂ ಮುನ್ನವೇ ವಿಜಯ್‌ಗೆ ಸಂಕಷ್ಟ? ಎರಡು ಕಡೆ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತ ಸಾಧ್ಯತೆ!

Iran-Israel war: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಮಧ್ಯೆ ಭಾರತಕ್ಕೆ 'ಕಚ್ಚಾ ತೈಲ, LNG ಸರಬರಾಜು ಹೆಚ್ಚಿಸಲು ಸಿದ್ಧ': ರಷ್ಯಾ

ಕೊಡಗು: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಕೇರಳ ಮೂಲದ ಮಹಿಳೆ ನಾಪತ್ತೆ!

ಕೇಂದ್ರವನ್ನ ಓಲೈಸೋದು ಬಿಟ್ಟು ಬಾಯಿ ಮುಚ್ಚಿಕೊಂಡಿರಿ: ಸಚಿವ ಮುನಿಯಪ್ಪ ವಿರುದ್ಧ KPCC ವಕ್ತಾರ ಲಕ್ಷ್ಮಣ್​​ ಗರಂ!

SCROLL FOR NEXT