ಕೆ.ಎಸ್ ಈಶ್ವರಪ್ಪ 
ರಾಜಕೀಯ

ಬಿಎಸ್ ವೈ ನೇತೃತ್ವದ ಸಭೆಗೆ ಈಶ್ವರಪ್ಪ ಗೈರು: ಪಕ್ಷದೊಳಗೆ ಮತ್ತೆ ಭಿನ್ನಮತದ ಹೊಗೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ...

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಕರೆದಿದ್ದ ನಂಜನಗೂಡು- ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಸೋಲಿನ ಆತ್ಮಾವಲೋಕನ ಸಭೆಗೆ ಹಿರಿಯ ಮುಖಂಡ ಕೆ.ಎಸ್ ಈಶ್ವರಪ್ಪ ಗೈರಾಗಿದ್ದಾರೆ.
ಸಭೆಯ ನಂತರ ಮಾತನಾಡಿದ  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ಜಗದೀಶ ಶೆಟ್ಟರ್‌ ಹಾಗೂ ಈಶ್ವರಪ್ಪ ಸಭೆಗೆ ಬರಲು ಸಾಧ್ಯವಾಗುತ್ತಿಲ್ಲ ಎಂದು ಮೊದಲೇ ಅನುಮತಿ ಪಡೆದಿದ್ದಾರೆ. ಈ ನಾಯಕರ ಗೈರು ಹಾಜರಿಗೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಸಮರ್ಥನೆ ನೀಡಿದ್ದಾರೆ.
ಪಕ್ಷದೊಳಗಿನ ಬಿಕ್ಕಟ್ಟು ಪರಿಹರಿಸಲು ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ನಾಲ್ವರ ಸಮಿತಿ ರಚಿಸಿದ್ದಾರೆ. ಕಳೆದ ಫೆಬ್ರುವರಿ 10ರೊಳಗೆ ಎಲ್ಲ ಸಮಸ್ಯೆಗಳನ್ನು ಪರಿಹಾರ ಮಾಡು­ವಂತೆಯೂ ಅವರು ಸೂಚಿಸಿದ್ದರು. ಇದುವರೆಗೂ ಸಮಿತಿ ಸಭೆ ಕರೆದಿಲ್ಲ ಯಡಿಯೂರಪ್ಪ ಸರ್ವಾಧಿ­ಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ಕಾರಣಕ್ಕೆ ಈಶ್ವರಪ್ಪ ಸಭೆಗೆ ಹಾಜರಾಗಿಲ್ಲ ಎಂದು ಹೇಳಲಾಗುತ್ತಿದೆ.
ಹಣದ ಹಂಚಿಕೆ,ಅಧಿಕಾರದ ದುರುಪಯೋಗ, ಜೆಡಿಎಸ್ ಜೊತೆಗೆ ಹೊಂದಾಣಿಕೆ, ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಅರವಿಂದ ಲಿಂಬಾವಳಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT