ಸಿದ್ದರಾಮಯ್ಯ 
ರಾಜಕೀಯ

ಕೆಂಪುದೀಪ ನಾನೇಕೆ ತೆಗೆಯಬೇಕು; ಮೇ 1ರಿಂದ ತಾನೆ: ಸಿಎಂ ಸಿದ್ದರಾಮಯ್ಯ ಪ್ರಶ್ನೆ?

ವಿಐಪಿ ವಾಹನಗಳ ಮೇಲಿನ ಕೆಂಪು ದೀಪ ಬಳಕೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಅನೇಕ ಸರ್ಕಾರಿ ಅಧಿಕಾರಿಗಳು ಮತ್ತು ಹಲವು ಜನಪ್ರತಿನಿಧಿಗಳು ...

ಬೆಂಗಳೂರು: ವಿಐಪಿ ವಾಹನಗಳ ಮೇಲಿನ ಕೆಂಪು ದೀಪ ಬಳಕೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಹಿನ್ನೆಲೆಯಲ್ಲಿ ಅನೇಕ ಸರ್ಕಾರಿ ಅಧಿಕಾರಿಗಳು ಮತ್ತು ಹಲವು ಜನಪ್ರತಿನಿಧಿಗಳು ಈಗಾಗಲೇ ತಮ್ಮ ವಾಹನಗಳ ಮೇಲಿನ ಕೆಂಪು ದೀಪ ತೆಗೆಸಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು  ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತಿಲ್ಲ. 
ನೀವು ಯಾವಾಗ ನಿಮ್ಮ ವಾಹನದ ಮೇಲಿನ ಕೆಂಪು ದೀಪ ತೆಗೆದು ಹಾಕಿಸುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ನಾನೇಕೆ ಕೆಂಪು ದೀಪ ತೆಗೆಸಲಿ ಎಂದು ಮರು ಪ್ರಶ್ನೆ ಹಾಕಿದ್ದಾರೆ, ಕೂಡಲೇ ತಮ್ಮ ತಪ್ಪನ್ನು ಸರಿ ಮಾಡಲು ಮುಂದಾದ ಸಿದ್ದರಾಮಯ್ಯ ಕೆಂಪು ದೀಪ ತೆಗೆಸಲು ಮೇ 1 ರವರೆಗೂ ಸಮಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಯಾರು ಕೆಂಪು ದೀಪ ತೆಗೆಯಲು ಹೇಳಿದ್ದು ಎಂದು ಸಿಎಂ ತಮ್ಮ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ, ಇದಕ್ಕೆ ಉತ್ತರಿಸಿದ ಸಿಬ್ಬಂದಿ, ಕೇಂದ್ರ ಸರ್ಕಾರದ ಆದೇಶದ ಮೇರೆಗೆ ತೆಗೆಯಲಾಗಿದೆ ಎಂದು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. 
ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂಗ್ರ ಸರ್ಕಾರ ಏಪ್ರಿಲ್ 19 ರಂದು ಎಲ್ಲಾ ಜನಪ್ರತಿನಿಧಿಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಾಹನಗಳ ಮೇಲಿರುವ ಕೆಂಪು ದೀಪವನ್ನು ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT