ಬಿಜೆಪಿ 
ರಾಜಕೀಯ

ಡೋಕ್ಲಾಮ್ ವಿವಾದ: ಚೀನಾ ಉತ್ಪನ್ನ ಬಹಿಷ್ಕಾರಕ್ಕೆ ರಾಜ್ಯ ಬಿಜೆಪಿ ಕರೆ

ಸಿಕ್ಕಿಂ ನಲ್ಲಿ ಉಂಟಾಗಿರುವ ಗಡಿ ವಿವಾದವನ್ನು ಕೇಂದ್ರ ಸರ್ಕಾರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಯತ್ನಿಸುತ್ತಿದೆ. ಈ ನಡುವೆ ಭಾರತದಲ್ಲಿ ಚೀನಾ ಉತ್ಪನ್ನ ಬಹಿಷ್ಕಾರ ಅಭಿಯಾನ ಪ್ರಾರಂಭವಾಗಿದ್ದು..

ಬೆಂಗಳೂರು: ಸಿಕ್ಕಿಂ ನಲ್ಲಿ ಉಂಟಾಗಿರುವ ಗಡಿ ವಿವಾದವನ್ನು ಕೇಂದ್ರ ಸರ್ಕಾರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಯತ್ನಿಸುತ್ತಿದೆ. ಈ ನಡುವೆ ಭಾರತದಲ್ಲಿ ಚೀನಾ ಉತ್ಪನ್ನ ಬಹಿಷ್ಕಾರ ಅಭಿಯಾನ ಪ್ರಾರಂಭವಾಗಿದ್ದು, ರಾಜ್ಯ ಬಿಜೆಪಿ ಸಹ ಚೀನಾ ವಸ್ತುಗಳನ್ನು ಬಹಿಷ್ಕರಿಸಲು ಕರೆ ನೀಡಿದೆ. 
ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ನಾಯಕರು ಚೀನಾ ಉತ್ಪಾದಿತ ಸರಕುಗಳನ್ನು ತ್ಯಜಿಸುವಂತೆ ಕರೆ ನೀಡಿದ್ದಾರೆ. ಕಾರ್ಯಕಾರಿಣಿ ಸಭೆಯ ಬಳಿಕ ಮಾತನಾಡಿರುವ ಶೋಭಾ ಕರಂದ್ಲಾಜೆ, ಮೊಬೈಲ್ ಫೋನ್ ನಿಂದ ಹಿಡಿದು ಕರ್ಪೂರದಂತಹ ಪೂಜೆ ಸಾಮಗ್ರಿಗಳ ವರೆಗೆ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಕರೆ ನೀಡಿದ್ದಾರೆ. 
ಭಾರತದ ಮಾರುಕಟ್ಟೆಗಳಲ್ಲಿ ಚೀನಾ ಸರಕುಗಳು ತುಂಬಿವೆ. ರಾಷ್ಟ್ರೀಯ ಭದ್ರತೆ ನಮ್ಮ ಆದ್ಯತೆಯಾಗಿದ್ದು ಚೀನಾ ವಸ್ತುಗಳನ್ನು ಬಹಿಷ್ಕರಿಸುವ ಬಗ್ಗೆ ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT