ಸಂಸದೆ ಶೋಭಾ ಕರಂದ್ಲಾಜೆ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿನ್ನೆ ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ. 
ರಾಜಕೀಯ

ಬಿಜೆಪಿ ಕಾರ್ಯಕಾರಿಣಿಗೆ ಈಶ್ವರಪ್ಪ ಗೈರು; ಪಕ್ಷದ ನಾಯಕರಿಗೆ ಇರುಸುಮುರುಸು

ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ...

ಬೆಂಗಳೂರು: ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಗೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಗೈರುಹಾಜರಾಗಿದ್ದು ರಾಜ್ಯದ ಬಿಜೆಪಿ ಮುಖಂಡರಿಗೆ ಇರುಸುಮುರುಸು ಉಂಟುಮಾಡಿದೆ. ಅವರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಡುವಿನ ಭಿನ್ನಾಭಿಪ್ರಾಯವನ್ನು ಇದು ಎತ್ತಿ ತೋರಿಸಿದೆ.
ಕಳೆದ ಶನಿವಾರ ನಡೆದ ಬಿಜೆಪಿ ಹಿರಿಯ ಮುಖಂಡರ ಸಭೆಯಲ್ಲಿ  ಈಶ್ವರಪ್ಪ ಭಾಗವಹಿಸಿದ್ದರು. ಆದರೆ ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಭಿನ್ನಮತ ಇನ್ನೂ ಶಮನವಾಗಿಲ್ಲ. ಇದಕ್ಕೆ ನಿನ್ನೆಯ ಕಾರ್ಯಕಾರಿಣಿಗೆ ಈಶ್ವರಪ್ಪ ಬಾರದೇ ಇದ್ದುದು ಸ್ಪಷ್ಟಪಡಿಸುತ್ತದೆ. ವಿಧಾನಸಭೆ ಚುನಾವಣೆ ಮುಂದಿನ ವರ್ಷವೇ ಇರುವುದರಿಂದ ಪ್ರಮುಖ ನಾಯಕರ ಜಗಳ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.  
ಮಾಧ್ಯಮಗಳೊಂದಿಗೆ ಮಾತನಾಡುವಾಗ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಈಶ್ವರಪ್ಪ ಅವರ ಗೈರುಹಾಜರಿಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ. ಇದು ಹಬ್ಬದ ಸಮಯವಾಗಿರುವುದರಿಂದ ಈಶ್ವರಪ್ಪ ಅವರು ಪೂಜಾ ವಿಧಿ ವಿಧಾನಗಳಲ್ಲಿ ಬ್ಯುಸಿಯಾಗಿರಬಹುದು. ಸಂಸದ ಜಿ.ಎಂ.ಸಿದ್ದೇಶ್ವರ ಅವರ ಮಗನ ನಿಶ್ಚಿತಾರ್ಥ ಕಾರ್ಯಕ್ರಮವಿರುವುದರಿಂದ ಕೆಲವು ನಾಯಕರು ಅಲ್ಲಿಗೆ ಹೋಗಿದ್ದಾರೆ ಎಂದರು.
ಭಿನ್ನಾಭಿಪ್ರಾಯವಿಲ್ಲ: ಈ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್.ಈಶ್ವರಪ್ಪ, ತಮ್ಮ ಮನೆಯಲ್ಲಿ ಪೂಜಾ ಕಾರ್ಯಕ್ರಮವಿದ್ದರಿಂದ ಬೆಂಗಳೂರಿನ ಬಿಜೆಪಿ ಕಾರ್ಯಕಾರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತಮ್ಮ ಮತ್ತು ಯಡಿಯೂರಪ್ಪ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT