ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಅಮಿತ್ ಶಾ ಪ್ರಚಾರ ಕರ್ನಾಟಕದಲ್ಲಿ ಕೆಲಸ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದಿಂದ ಕಾಂಗ್ರೆಸ್ ನ್ನು ಕಿತ್ತೊಗೆಯಿರಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿನ್ನೆ ಪಕ್ಷದ ಕಾರ್ಯಕರ್ತರಿಗೆ ....

ಕಲಬುರಗಿ: ರಾಜ್ಯದಿಂದ ಕಾಂಗ್ರೆಸ್ ನ್ನು ಕಿತ್ತೊಗೆಯಿರಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ ಗಳಿಕೆಗಾಗಿ ಅಮಿತ್ ಶಾ ವಿಭಜನೆ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಆರೋಪಿಸಿದರು.
ನಿನ್ನೆ ಕಲಬುರಗಿಯ ಅಳಂದದಲ್ಲಿ ಮಿನಿ ವಿಧಾನ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಕಾರ್ಯತಂತ್ರ ರೂಪಿಸುತ್ತಿದ್ದಾರಲ್ಲವೇ ಎಂಬ ಬಗ್ಗೆ ಸುದ್ದಿಗಾರರು ಪ್ರಶ್ನೆ ಕೇಳಿದಾಗ, ಈಗಿನಿಂದಲೇ ಬೇಕಾದರೆ ಪ್ರಧಾನ ಮಂತ್ರಿ ಮೋದಿ ಮತ್ತು ಅಮಿತ್ ಶಾ ಕರ್ನಾಟಕದಲ್ಲಿ ಪ್ರಚಾರ ಆರಂಭಿಸಲಿ. ಅವರ ಪ್ರಚಾರ ಅಥವಾ ಚುನಾವಣೆಯಲ್ಲಿ ಗೆಲ್ಲುವ ಕಾರ್ಯತಂತ್ರ ಕೆಲಸ ಮಾಡುವುದಿಲ್ಲ. ಬಿಜೆಪಿ ಏನು ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸಾಧ್ಯತೆಯನ್ನು ಕೂಡ ತಳ್ಳಿ ಹಾಕಿದರು.
ಹಿಂದ ಅಂದರೆ ಹಿಂದುಳಿದವರು ಮತ್ತು ದಲಿತರನ್ನು ಸೆಳೆಯುವ ಬಿಜೆಪಿ ಪ್ರಯತ್ನ ಕೂಡ ಫಲ ನೀಡುವುದಿಲ್ಲ. ಯಾಕೆಂದರೆ ಬಿಜೆಪಿ ಸಾಮಾಜಿಕ ನ್ಯಾಯ ಹಾಗೂ ಬದ್ಧತೆಯನ್ನು ಹೊಂದಿಲ್ಲ ಎಂಬುದು ಈ ರಾಜ್ಯದ ಜನತೆಗೆ ಗೊತ್ತಿದೆ ಎಂದು ಟೀಕಿಸಿದರು.
ನಂತರ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಣಕಿಸಿದರು. 2018ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟುಗಳನ್ನು ಗೆಲ್ಲಬೇಕೆಂಬ ಯಡಿಯೂರಪ್ಪನವರ ಯೋಜನೆಯಿದೆ. ಆದರೆ ಗೆಲ್ಲುವುದು ಮಾತ್ರ ಸುಮಾರು 50 ಸೀಟುಗಳನ್ನಷ್ಟೆ, ನೋಡುತ್ತಿರಿ ಎಂದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿ, ತಾವಾಗಲಿ, ಕಾಂಗ್ರೆಸ್ ಪಕ್ಷವಾಗಲಿ ಐಟಿ ದಾಳಿಯನ್ನು ವಿರೋಧಿಸುವುದಿಲ್ಲ. ಆದರೆ ಎನ್ ಡಿಎ ಸರ್ಕಾರ ಕಾಂಗ್ರೆಸ್ ನಾಯಕರನ್ನು ಮಾತ್ರ  ಏಕೆ ಗುರಿಯಾಗಿಟ್ಟುಕೊಂಡಿದೆ ಎಂಬುದು ನಮ್ಮ ಪ್ರಶ್ನೆ. ಬಿಜೆಪಿಯ ಎಲ್ಲಾ ನಾಯಕರೇನು ಸತ್ಯ ಹರಿಶ್ಚಂದ್ರರೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT