ಅಮಿತ್ ಶಾ 
ರಾಜಕೀಯ

ಗೋರಕ್ ಪುರ ದುರಂತ ಒಂದು ಆಕಸ್ಮಿಕ, ಭಾರತದಲ್ಲಿ ಇಂಥ ಘಟನೆಗಳು ಸಂಭವಿಸುತ್ತೇವೆ: ಅಮಿತ್ ಶಾ

ಸುಮಾರು 70 ಅಮಾಯಕ ಮಕ್ಕಳನ್ನು ಬಲಿ ಪಡೆದ ಗೋರಕ್'ಪುರ ಆಸ್ಪತ್ರೆ ದುರಂತ ಒಂದು ಆಕಸ್ಮಿಕ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ....

ಬೆಂಗಳೂರು: ಸುಮಾರು 70 ಅಮಾಯಕ ಮಕ್ಕಳನ್ನು ಬಲಿ ಪಡೆದ ಗೋರಕ್'ಪುರ ಆಸ್ಪತ್ರೆ ದುರಂತ ಒಂದು ಆಕಸ್ಮಿಕ ಎಂದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಭಾರತದಂತಹ ದೊಡ್ಡ ದೇಶಗಳಲ್ಲಿ ಇಂಥಹ ಘಟನೆಗಳು ಹಾಗಾಗ ಸಂಭವಿಸುತ್ತವೆ ಎಂದು ಸೋಮವಾರ ಹೇಳಿದ್ದಾರೆ.
ಮೂರು ದಿನಗಳ ರಾಜ್ಯ ಬಿಜೆಪಿ ನಾಯಕರ ಜತೆಗಿನ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಶಾ, ಗೋರಕ್'ಪುರ ಆಸ್ಪತ್ರೆ ದುರಂತ ಒಂದು ಆಕಸ್ಮಿಕ. ಈ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿರ್ಧಿಷ್ಟ ಸಮಯದಲ್ಲಿ ತನಿಖೆಗೆ ಆದೇಶಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ.
ಗೋರಖಪುರ ದುರಂತದಂಥ ಘಟನೆ ನಡೆದಿರುವುದು ದೇಶದಲ್ಲಿ ಇದೇ ಮೊದಲಲ್ಲ. ಭಾರತದಂಥ ದೊಡ್ಡ ದೇಶದಲ್ಲಿ ಇಂಥ ಘಟನೆಗಳು ಈ ಹಿಂದೆಯೂ ನಡೆದಿವೆ. ಆದರೆ ರಾಜಿನಾಮೆ ಕೇಳುವುದು ಕಾಂಗ್ರೆಸ್‌ ನ ಕೆಲಸ ಎಂದು ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.
ಘಟನೆಗೆ ಆಡಳಿತಾರೂಢ ಬಿಜೆಪಿ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಕಾಂಗ್ರೆಸ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT