ಸಿಎಂ ಇಬ್ರಾಹಿಂ 
ರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ನಿಂದ ಸಿಎಂ ಇಬ್ರಾಹಿಂಗೆ ಟಿಕೆಟ್

ಆಗಸ್ಟ್ 31ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ....

ನವದೆಹಲಿ: ಆಗಸ್ಟ್ 31ರಂದು ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ.
ಮೊದಲಿನಿಂದಲೂ ಮೇಲ್ಮನೆ ಸ್ಥಾನಕ್ಕಾಗಿ, ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಡುತ್ತಲೇ ಬಂದಿದ್ದ ಇಬ್ರಾಹಿಂ ಅವರನ್ನು ಅಲ್ಪಾವಧಿಗಾದರೂ, ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಬೇಕೆಂದು ಸಿಎಂ ತೀವ್ರ ಪ್ರಯತ್ನ ನಡೆಸಿ, ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದರು. ಸಿಎಂ ಪಟ್ಟು ಹಿಡಿದಿದ್ದರಿಂದ ಹೈಕಮಾಂಡ್‌ ಇಬ್ರಾಹಿಂಗೆ ಟಿಕೆಟ್‌ ನೀಡಲು ಒಪ್ಪಿಗೆ ಸೂಚಿಸಿದೆ. 
ವಿಧಾನ ಪರಿಷತ್ ಚುನಾವಣೆಗೆ ಸಿಎಂ ಇಬ್ರಾಹಿಂ ಅವರಿಗೆ ಟಿಕೆಟ್ ನೀಡಿರುವುದಾಗಿ ಎಐಸಿಸಿ ಇಂದು ಅಧಿಕೃತ ಪ್ರಕಟಿಸಿದೆ.
ವಿಧಾನಪರಿಷತ್ ಸದಸ್ಯೆ ವಿಮಲಾಗೌಡ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಆಗಸ್ಟ್ 31 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT