ಶಂಕರಮೂರ್ತಿ 
ರಾಜಕೀಯ

ಎಂಟು ಎಂಎಲ್ ಸಿಗಳ ಅನರ್ಹಕ್ಕೆ ಒತ್ತಾಯ: ಸಚಿವ ಸ್ಥಾನ ಆಕಾಂಕ್ಷಿ ಆರ್ .ಬಿ ತಿಮ್ಮಾಪುರಗೆ ಸಂಕಷ್ಟ

ಸದ್ಯ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಆರ್. ಬಿ ತಿಮ್ಮಾಪುರ ಸೇರಿದಂತೆ 8 ವಿಧಾನ ಪರಿಷತ್ ಸದಸ್ಯರುಗಳಿಗೆ ಸಂಕಷ್ಟ ...

ಬೆಂಗಳೂರು: ಸದ್ಯ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಆರ್. ಬಿ ತಿಮ್ಮಾಪುರ ಸೇರಿದಂತೆ 8 ವಿಧಾನ ಪರಿಷತ್ ಸದಸ್ಯರುಗಳಿಗೆ ಸಂಕಷ್ಟ ಎದುರಾಗಿದೆ. ಈ ಎಂಟು ಎಂಎಲ್ ಸಿಗಳ ಹಣೆ ಬರಹವನ್ನು ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ನಿರ್ಧರಿಸಲಿದ್ದಾರೆ.
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೇಯರ್‌ ಚುನಾವಣೆ ವೇಳೆ,  ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಎಂಟು ಮಂದಿ ವಿಧಾನಪರಿಷತ್‌ ತರಾತುರಿಯಲ್ಲಿ ತಮ್ಮ ವಿಳಾಸವನ್ನು ಬೆಂಗಳೂರಿಗೆ ಬದಲಿಸಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದರು.
ವಿಧಾನ ಪರಿಷತ್‌ ಸದಸ್ಯರಾದ ಕಾಂಗ್ರೆಸ್‌ನ ಆರ್‌.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ರಘು ಆಚಾರ್‌, ಎನ್‌.ಎಸ್‌.ಬೋಸರಾಜ,  ಎಸ್‌.ರವಿ, ಜೆಡಿಎಸ್‌ನ ಸಿ.ಆರ್‌.ಮನೋಹರ್‌, ಅಪ್ಪಾಜಿ ಗೌಡ ಮತ್ತು ಪಕ್ಷೇತರ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಅವರು ಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು ರಾಜ್ಯ ಮುಖ್ಯ  ಚುನಾವಣಾ  ಆಯುಕ್ತ ಅನಿಲ್ ಕುಮಾರ್ ಜಾ ಅವರಿಗೆ ವರದಿ ಸಲ್ಲಿಸಿದ್ದರು.
ಸದಸ್ಯರು ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಂಡ ಬಳಿಕ ತಮ್ಮ ಹಳೆಯ ವಿಳಾಸ ನೀಡಿ ಟಿಎ, ಡಿಎ ಪಡೆದಿದ್ದಾರೆ. ಈ 8 ಮಂದಿ ಸದಸ್ಯರು ಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. 
ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸಿದ ಬಳಿಕ  ಮೇಲ್ಮನೆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT