ಶಂಕರಮೂರ್ತಿ 
ರಾಜಕೀಯ

ಎಂಟು ಎಂಎಲ್ ಸಿಗಳ ಅನರ್ಹಕ್ಕೆ ಒತ್ತಾಯ: ಸಚಿವ ಸ್ಥಾನ ಆಕಾಂಕ್ಷಿ ಆರ್ .ಬಿ ತಿಮ್ಮಾಪುರಗೆ ಸಂಕಷ್ಟ

ಸದ್ಯ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಆರ್. ಬಿ ತಿಮ್ಮಾಪುರ ಸೇರಿದಂತೆ 8 ವಿಧಾನ ಪರಿಷತ್ ಸದಸ್ಯರುಗಳಿಗೆ ಸಂಕಷ್ಟ ...

ಬೆಂಗಳೂರು: ಸದ್ಯ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿಯಾಗಿರುವ ಆರ್. ಬಿ ತಿಮ್ಮಾಪುರ ಸೇರಿದಂತೆ 8 ವಿಧಾನ ಪರಿಷತ್ ಸದಸ್ಯರುಗಳಿಗೆ ಸಂಕಷ್ಟ ಎದುರಾಗಿದೆ. ಈ ಎಂಟು ಎಂಎಲ್ ಸಿಗಳ ಹಣೆ ಬರಹವನ್ನು ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ನಿರ್ಧರಿಸಲಿದ್ದಾರೆ.
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮೇಯರ್‌ ಚುನಾವಣೆ ವೇಳೆ,  ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಎಂಟು ಮಂದಿ ವಿಧಾನಪರಿಷತ್‌ ತರಾತುರಿಯಲ್ಲಿ ತಮ್ಮ ವಿಳಾಸವನ್ನು ಬೆಂಗಳೂರಿಗೆ ಬದಲಿಸಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿದ್ದರು.
ವಿಧಾನ ಪರಿಷತ್‌ ಸದಸ್ಯರಾದ ಕಾಂಗ್ರೆಸ್‌ನ ಆರ್‌.ಬಿ.ತಿಮ್ಮಾಪುರ, ಅಲ್ಲಂ ವೀರಭದ್ರಪ್ಪ, ರಘು ಆಚಾರ್‌, ಎನ್‌.ಎಸ್‌.ಬೋಸರಾಜ,  ಎಸ್‌.ರವಿ, ಜೆಡಿಎಸ್‌ನ ಸಿ.ಆರ್‌.ಮನೋಹರ್‌, ಅಪ್ಪಾಜಿ ಗೌಡ ಮತ್ತು ಪಕ್ಷೇತರ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ ಅವರು ಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಬಿಬಿಎಂಪಿ ಆಯುಕ್ತರು ರಾಜ್ಯ ಮುಖ್ಯ  ಚುನಾವಣಾ  ಆಯುಕ್ತ ಅನಿಲ್ ಕುಮಾರ್ ಜಾ ಅವರಿಗೆ ವರದಿ ಸಲ್ಲಿಸಿದ್ದರು.
ಸದಸ್ಯರು ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಂಡ ಬಳಿಕ ತಮ್ಮ ಹಳೆಯ ವಿಳಾಸ ನೀಡಿ ಟಿಎ, ಡಿಎ ಪಡೆದಿದ್ದಾರೆ. ಈ 8 ಮಂದಿ ಸದಸ್ಯರು ಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸುವ ಉದ್ದೇಶದಿಂದ ನಗರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿರುವುದಾಗಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. 
ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿ ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸಿದ ಬಳಿಕ  ಮೇಲ್ಮನೆ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಚಿತ್ರದುರ್ಗದಲ್ಲಿ ಭೀಕರ ಆ್ಯಸಿಡ್ ದಾಳಿ: ಮಹಿಳೆ, ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ, ಆರೋಪಿಗಾಗಿ ಪೊಲೀಸರ ಶೋಧ

SCROLL FOR NEXT