ಉಪೇಂದ್ರ 
ರಾಜಕೀಯ

ನನ್ನ ಕ್ಯಾಶ್‌ಲೆಸ್‌ ಪಕ್ಷಕ್ಕೆ ಶ್ರಮಿಕರು ಬೇಕು, ನಾಯಕರಲ್ಲ: ಉಪೇಂದ್ರ

ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ರಾಜಕೀಯ ಪಕ್ಷವನ್ನು ಸೃಷ್ಟಿಸಿದ್ದು ಹಳೆಯ ವಿಚಾರ...

ಮೈಸೂರು: ಸ್ಯಾಂಡಲ್ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು ರಾಜಕೀಯ ಪಕ್ಷವನ್ನು ಸೃಷ್ಟಿಸಿದ್ದು ಹಳೆಯ ವಿಚಾರ. 
ತಮ್ಮ ಪಕ್ಷದ ಕುರಿತಂತೆ ಮಾತನಾಡಿರುವ ಉಪೇಂದ್ರ ಅವರು ನನ್ನ 'ಕ್ಯಾಶ್‌ಲೆಸ್‌' ಕರ್ನಾಟಕ ಪ್ರಜಾಕೀಯ ಜನತಾಪಕ್ಷ(ಕೆಪಿಜೆಪಿ)ಕ್ಕೆ ಸಾರ್ವಜನಿಕರೊಂದಿಗೆ ನಿತ್ಯ ಸಂಪರ್ಕದಲ್ಲಿರುವ ಶ್ರಮಿಕರು ಬೇಕೇ ಹೊರತು ನಾಯಕರಲ್ಲ ಎಂದು ಹೇಳಿದ್ದಾರೆ. 
ನನ್ನದು ಕ್ಯಾಶ್‌ಲೆಸ್‌ ಪಕ್ಷ. ಹೀಗಾಗಿ ಚುನಾವಣೆಯಲ್ಲಿ ನಾವು ಹಣವನ್ನು ಅಂಚುವುದಿಲ್ಲ. ಚುನಾವಣೆಗಾಗಿ ಕೋಟ್ಯಾಂತರ ರುಪಾಯಿ ಖರ್ಚು ಮಾಡುವವರು ತಾವು ಗೆದ್ದ ಮೇಲೆ ಚುನಾವಣೆಗೆ ಖರ್ಚು ಮಾಡಿರುವ ಹಣವನ್ನು ಹೇಗೆ ಹಿಂಪಡೆಯಬೇಕು ಎಂದು ಯೋಚಿಸುತ್ತಾರೆ ಅಂತಹವರು ನಮ್ಮ ಪಕ್ಷಕ್ಕೆ ಬೇಡ ಎಂದು ಹೇಳಿದರು. 
ಇದೇ ವೇಳೆ ಮಹಾರಾಜ(ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್) ಅವರು ನಮ್ಮ ಪಕ್ಷಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ. ಅವರಂತೆ ಹಲವು ವಿದ್ಯಾವಂತ ಜನರು ನಮ್ಮ ಪಕ್ಷವನ್ನು ಬೆಂಬಲಿಸಿದ್ದು ಅವರ ಹೆಸರುಗಳನ್ನು ಮುಂದೊಂದು ದಿನ ಬಹಿರಂಗಪಡಿಸುವುದಾಗಿ ಉಪೇಂದ್ರ ಹೇಳಿದರು. 
ಜಾತಿ ರಾಜಕಾರಣ ಸ್ವೀಕಾರ್ಹವಲ್ಲ. ಇಂದು ಶೇಖಡ 70ರಷ್ಟು ರಾಜಕೀಯವು ಜಾತಿ ಆಧಾರಿತವಾಗಿದೆ. ಅದನ್ನು ಶೇಖಡ 100ರಷ್ಟಾಗಲು ನಾವು ಬಿಡಬಾರದು. ಗೆಲುವು ಅಥವಾ ಸೋಲು ನಮಗೆ ಮುಖ್ಯವಲ್ಲ. ಆದರೆ ಸಮಾಜಕ್ಕೆ ಇದರಿಂದ ಉತ್ತಮ ಸಂದೇಶವನ್ನು ಕಳುಹಿಸಬೇಕು. ಎಲ್ಲರು ಜಾತಿ ರಾಜಕಾರಣ ಅಥವಾ ಮತವನ್ನು ಪಡೆಯಲು ಹಣವನ್ನು ಅಂಚುತ್ತಾರೆ ಎಂದು ಹೇಳಲ್ಲ. ಕೆಲ ಉತ್ತಮ ರಾಜಕಾರಣಿಗಳು ಇದ್ದಾರೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT