ಅನಂತ್ ಕುಮಾರ್ 
ರಾಜಕೀಯ

ಹಿಂದೂ ಹಬ್ಬಗಳ ಆಚರಣೆ ತಡೆಯಲು ಸಿದ್ದರಾಮಯ್ಯ 'ರಾವಣ'ನಂತಾಗಿದ್ದಾರೆ: ಅನಂತ್ ಕುಮಾರ್

ಹಿಂದೂಗಳು ಆಚರಿಸುವ ಹಬ್ಬಗಳು ಹಾಗೂ ಮೆರವಣಿಗೆಗಳನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಂತಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತ್...

ಮೈಸೂರು: ಹಿಂದೂಗಳು ಆಚರಿಸುವ ಹಬ್ಬಗಳು ಹಾಗೂ ಮೆರವಣಿಗೆಗಳನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಂತಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಟೀಕಿಸಿದ್ದಾರೆ. 
ರಾಜ್ಯದಲ್ಲಿ ಟಿಪ್ಪು ಜಯಂತಿ, ಈದ್ ಮಿಲಾದ್ ಮೆರವಣಿಗೆಗೆ ಅನುಮತಿ ನೀಡುವ ಸರ್ಕಾರವು ಹನುಮ ಜಯಂತಿ ಮೆರವಣಿಗೆಗೆ ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ. 
ಕರ್ನಾಟಕದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಮುಖ್ಯಮಂತ್ರಿ ಅವರೇ ಮುಖ್ಯ ಕಾರಣ. ಹಿಂದೂಗಳ ಹಬ್ಬಗಳ ಆಚರಣೆಗೆ ಸಿದ್ದರಾಮಯ್ಯನವರು ರಾವಣನಂತೆ ತಯಾರಾಗಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಗೆ ಅನುಮತಿ ನೀಡದಿರುವುದು ಮುಖ್ಯಮಂತ್ರಿಗಳ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದರು. 
ಇನ್ನು ಹನುಮ ಜಯಂತಿ ಮೆರವಣಿಗೆ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ. ಅದರಲ್ಲೂ ಸಂಸದ ಪ್ರತಾಪ್ ಸಿಂಹ ಅವರ ಬಂಧನವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಬಗ್ಗೆ ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT