ಜಗದೀಶ್ ಶೆಟ್ಟರ್ 
ರಾಜಕೀಯ

ಮಲ್ಲಮ್ಮ ಕಾಂಗ್ರೆಸ್‌ ಸೇರ್ಪಡೆ: ಸಿಎಂ ಸಿದ್ದರಾಮಯ್ಯರಿಂದ ಬೇಜವಾಬ್ದಾರಿ ಹೇಳಿಕೆ ಎಂದ ಶೆಟ್ಟರ್‌

ಹತ್ಯೆಯಾದ ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಅವರ ಪತ್ನಿ ಮಲ್ಲಮ್ಮ ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ...

ಹುಬ್ಬಳ್ಳಿ: ಹತ್ಯೆಯಾದ ಧಾರವಾಡ ಜಿಲ್ಲಾ ಪಂಚಾಯತ್ ಬಿಜೆಪಿ ಸದಸ್ಯ ಯೋಗೀಶ್‌ ಗೌಡ ಅವರ ಪತ್ನಿ ಮಲ್ಲಮ್ಮ ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಭಾನುವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶೆಟ್ಟರ್, ಬಿಜೆಪಿಯವರ ಕಿರುಕುಳ ತಾಳಲಾಗದೆ ಮಲ್ಲಮ್ಮ ಕಾಂಗ್ರೆಸ್‌ ಸೇರಿದ್ದಾರೆ ಎಂದು ಕಲಬುರ್ಗಿಯಲ್ಲಿ ಸಿಎಂ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಯೋಗೀಶ್ ಗೌಡ ಹತ್ಯೆ ಸಂಬಂಧ ಒಂದು ವರ್ಷದಿಂದ ತನಿಖೆ ನಡೆದಿದೆ. ಹತ್ಯೆ ಪ್ರಕರಣ ಮುಚ್ಚಿಹಾಕಲು ಯೋಗೀಶ್ ಗೌಡ ಅವರ ಪತ್ನಿ ಮಲ್ಲಮ್ಮ ಅವರ ಮೇಲೆ ಒತ್ತಡ ಹೇರಲಾಗುತ್ತಿದೆ. ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣ ಮುಚ್ಚಿಹಾಕಲು ವ್ಯವಸ್ಥಿತವಾದ ಪಿತೂರಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. 
ಮಲ್ಲಮ್ಮ ದಿಟ್ಟ ಮಹಿಳೆ. ಮಲ್ಲಮ್ಮ ಹೊರತಾಗಿಯು ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದ ಶೆಟ್ಟರ್, ಯೋಗೀಶ್ ಗೌಡ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಈ ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು. ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವವರು ದೊಡ್ಡ ಸಾಧನೆ ಮಾಡಿದಂತೆ ಬೀಗುತ್ತಿದ್ದಾರೆ. ಇಂದಲ್ಲ ನಾಳೆ ಸತ್ಯ ಹೊರಗೆ ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಚೀನಾ, ಇಡೀ ಜಗತ್ತಿಗೆ' ಹಾರ್ಮುಜ್ ಅನ್ನು 'ಶಾಶ್ವತವಾಗಿ' ತೆರೆಯುತ್ತೇವೆ; ಜಿನ್ ಪಿಂಗ್ ನನಗೆ ದೊಡ್ಡ ಅಪ್ಪುಗೆ ನೀಡುತ್ತಾರೆ: ಟ್ರಂಪ್

BJP ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣ: Congress ಶಾಸಕ ವಿನಯ್ ಕುಲಕರ್ಣಿ ಅಪರಾಧಿ; ಕೋರ್ಟ್ ತೀರ್ಪು!

ತಂದೆಯ ಲೆಗಸಿ ಮುಂದುವರೆಸಲು ರಾಜಕೀಯಕ್ಕೆ ಬಂದೆ: ಕುಟುಂಬ ರಾಜಕಾರಣಕ್ಕೆ ಯತೀಂದ್ರ ಸಿದ್ದರಾಮಯ್ಯ ಹೊಸ ವ್ಯಾಖ್ಯಾನ!

TCS ಬೆನ್ನಲ್ಲೇ ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌: ಮಹಾರಾಷ್ಟ್ರ ಮುಖ್ಯಮಂತ್ರಿ, ಸಚಿವರಿಗೆ ದೂರು

"ನಿಮ್ಮೊಂದಿಗೆ ಒಪ್ಪಂದ ಯಾವಾಗ ಬೇಕಾದರೂ ಬದಲಿಸಬಹುದು": ಟ್ರಂಪ್ ಬೆದರಿಕೆಗೆ ಯುಕೆ ತಿರುಗೇಟು

SCROLL FOR NEXT