ಕೇಂದ್ರ ಸಚಿವ ಅನಂತ್ ಕುಮಾರ್ 
ರಾಜಕೀಯ

ರಾಷ್ಟ್ರೀಯ ತನಿಖಾ ಸಂಸ್ಥೆ ಪರೇಶ್ ಮೆಸ್ತಾ ಸಾವಿನ ತನಿಖೆ ನಡೆಸಲಿ: ಅನಂತ್ ಕುಮಾರ್ ಒತ್ತಾಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ...

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯಲ್ಲಿ ಪರೇಶ್ ಮೆಸ್ತಾ ಶಂಕಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಇನ್ನೂ ಹಸ್ತಾಂತರಿಸಿಲ್ಲ ಎಂದು ಆರೋಪಿಸಿದ ಕೇಂದ್ರ ಸಚಿವ ಅನಂತ್ ಕುಮಾರ್, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಪರೇಶೆ ಮೆಸ್ತಾ ಸಾವಿನ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಹೇಳಿ ರಾಜ್ಯ ಸರ್ಕಾರ ನಾಟಕವಾಡುತ್ತಿದೆ. ಈ ಸಂಬಂಧ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ಆದುದರಿಂದ ರಾಷ್ಟ್ರೀಯ ತನಿಖೆ ನಡೆಸುವಂತೆ ನಾನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.
ಪರೇಶ್ ಮೆಸ್ತಾನ ಸಂಶಯಾಸ್ಪದ ಸಾವಿನ ಪ್ರಕರಣ ಇತ್ತೀಚೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿ ಪೊಲೀಸರು ನಿಷೇಧಾಜ್ಞೆ ಆದೇಶ ಜಾರಿಗೊಳಿಸಬೇಕಾಯಿತು. 
ಇದೇ ವೇಳೆ ಮಾತನಾಡಿದ ಅನಂತ್ ಕುಮಾರ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು ರಾಜ್ಯದ 225 ವಿಧಾನಸಭಾ ಕ್ಷೇತ್ರಗಳ ಪೈಕಿ 150ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ, ಕೆ.ಆರ್.ಪುರಂ ಶಾಸಕ ಬಿ.ಎ.ಬಸವರಾಜ್ ಅವರ ಆಡಳಿತಾವಧಿಯಲ್ಲಿ 81 ಕೊಲೆ ಪ್ರಕರಣಗಳಾಗಿವೆ. ರಿಯಲ್ ಎಸ್ಟೇಟ್ ಮಾಫಿಯಾ ದಂಗೆಯ ಕಿಂಗ್ ಪಿನ್ ಬಸವರಾಜ್ ಅವರೇ ಎಂದು ಪರೋಕ್ಷವಾಗಿ ಹೇಳಿದರು. 
ಪರಿವರ್ತನಾ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಸವರಾಜ್ ಅವರು ಶಾಸಕರಾದ ಮೇಲೆ ಕೆ.ಆರ್.ಪುರಂ ಕ್ಷೇತ್ರದಲ್ಲಿ ಪರಿಸ್ಥಿತಿ ಹದಗೆಟ್ಟಿದ್ದು ಮೂಲಭೂತ ಸೌಕರ್ಯಗಳಿಂದ ನಲುಗುಹೋಗುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT