ಹುಬ್ಬಳ್ಳಿ: ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದು, ಬೊಕ್ಕಸವನ್ನು ಖಾಲಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ನೀರಾವರಿ ಯೋಜನೆಗಳಿಗೆ ಖರ್ಚು ಮಾಡಿದ 45,000 ಕೋಟಿ ರೂಪಾಯಿಗಳಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಶೇಕಡಾ 60ರಷ್ಟು ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿನ್ನೆ ಹುಬ್ಬಳ್ಳಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ ತಮ್ಮ ಸರ್ಕಾರ ಉತ್ತರ ಕರ್ನಾಟಕ ಭಾಗದ ಯೋಜನೆಗಳಿಗೆ 26,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದು ಮುಂದಿನ ಮಾರ್ಚ್ ವರೆಗೆ ಹೆಚ್ಚುವರಿ 4 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗುವುದು. ನೀರಾವರಿ ಯೋಜನೆಗಳಿಗೆ 50,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡುವ ಮೂಲಕ ಜನರಿಗೆ ನೀಡಿದ್ದ ಭರವಸೆಗಳನ್ನು ಕಾಂಗ್ರೆಸ್ ಪೂರೈಸುತ್ತಿದ್ದು ಉಳಿದ ಹಣವನ್ನು ಮುಂದಿನ ಹಣಕಾಸು ವರ್ಷದೊಳಗೆ ಪೂರೈಸಲಾಗುವುದು ಎಂದರು.
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ತಮ್ಮ ಸರ್ಕಾರ ಈಗಾಗಲೇ ಬಹುತೇಕ ಈಡೇರಿಸಿದ್ದು ಚುನಾವಣಾ ಪ್ರಣಾಳಿಕೆಗಳು ಮಾತ್ರವಲ್ಲದೆ ಇತರ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೂಡ ಜಾರಿಗೊಳಿಸಲಾಗಿದೆ. ಮುಂದಿನ ಮಾರ್ಚ್ ಒಳಗೆ ರಾಜ್ಯವನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ. ಎಲ್ಲಾ ಜಾತಿ, ಧರ್ಮದವರಿಗೆ ಸರ್ಕಾರದ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos