ನಾಯಕರ ಭೋಜನಕ್ಕೆ ಸಿದ್ದವಾದ ಬೆಳ್ಳಿ ತಟ್ಟೆ ಮತ್ತು ಪಿಂಗಾಣಿ 
ರಾಜಕೀಯ

ಮುಖ್ಯಮಂತ್ರಿ ಮತ್ತು ಸಹೋದ್ಯೋಗಿಗಳ ಭೋಜನಕ್ಕೆ 10 ಲಕ್ಷ ಖರ್ಚು ಮಾಡಲಾಗಿದೆ: ಬಿಜೆಪಿ ನಾಯಕ ಆರೋಪ

ಕಳೆದ ಡಿಸೆಂಬರ್ 16ರಂದು ಕಲಬುರಗಿಯಲ್ಲಿ ಸಾಧನ ಸಂಭ್ರಮ ಕಾರ್ಯಕ್ರಮದಲ್ಲಿ ....

ಕಲಬುರಗಿ: ಕಳೆದ ಡಿಸೆಂಬರ್ 16ರಂದು ಕಲಬುರಗಿಯಲ್ಲಿ ಸಾಧನ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮತ್ತು ಅವರ ಸಹೋದ್ಯೋಗಿಗಳು ಹಾಗೂ ಇತರ ಅಧಿಕಾರಿಗಳ ಭೋಜನಕ್ಕೆ  ಜಿಲ್ಲಾಡಳಿತ 10 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. 
ಕಲಬುರಗಿ ಜಿಲ್ಲೆಯ ಬಿಜೆಪಿ ಮಾಜಿ ಅಧ್ಯಕ್ಷ ರಾಜಕುಮಾರ್ ಪಾಟೀಲ್ ಟೆಲ್ಕುರ್, ಸುದ್ದಿಗಾರರ ಜೊತೆ ಮಾತನಾಡಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಅವರ ಪರವಾಗಿ ಐವಾನ್ ಇ ಶಾಹಿ ಗೆಸ್ಟ್ ಹೌಸ್ ನಲ್ಲಿ ಮುಖ್ಯಮಂತ್ರಿ ಹಾಗೂ ಇತರರಿಗೆ ರಾತ್ರಿ ಭೋಜನವನ್ನು ಜಿಲ್ಲಾಡಳಿತ ಏರ್ಪಡಿಸಿತ್ತು.
ಪ್ರತಿಯೊಬ್ಬರ ಊಟಕ್ಕೆ ಜಿಲ್ಲಾಡಳಿತ ತಲಾ 800 ರೂಪಾಯಿ ಖರ್ಚು ಮಾಡಿದೆ. ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಶರಣ್ ಪ್ರಕಾಶ್ ಪಾಟೀಲ್, ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಶರಣಬಸಪ್ಪ ದರ್ಶನಾಪುರ, ಅಳಂದ ಶಾಸಕ  ಬಿ.ಆರ್.ಪಾಟೀಲ್ ಮೊದಲಾದವರು ಅಂದು ಮುಖ್ಯಮಂತ್ರಿಗಳ ಜೊತೆ ಭೋಜನ ಸವಿದಿದ್ದಾರೆ. 
ಹೈದರಾಬಾದ್ ಮೂಲದ ಕ್ಯಾಟರಿಂಗ್ ನವರಿಂದ ಭೋಜನವನ್ನು ಪೂರೈಸಲಾಯಿತು. ಊಟ ಮಾಡಲು ಬೆಳ್ಳಿ ತಟ್ಟೆ ಮತ್ತು ಪಿಂಗಾಣಿಯನ್ನು ಬಳಸಲಾಯಿತು. ಈ ನಾಯಕರು ಸಾಮಾನ್ಯ ಜನತೆಗೆ ಏನು ಸಂದೇಶ ಸಾರಲು ಹೊರಟಿದ್ದಾರೆ ಎಂದು ಕೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT