ಬಿಎಸ್ ಯಡಿಯೂರಪ್ಪ 
ರಾಜಕೀಯ

ಇಂದಿರಾ, ಅಪ್ಪಾಜಿ, ರಮ್ಯಾ ಕ್ಯಾಂಟೀನ್ ಆಯ್ತು, ಈಗ ಯಡಿಯೂರಪ್ಪಾಜಿ ಕ್ಯಾಂಟೀನ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ನಂತರ ಅದಕ್ಕೆ ಪ್ರತಿಸ್ಫರ್ಧಿಯಾಗಿ ಜೆಡಿಎಸ್....

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ನಂತರ ಅದಕ್ಕೆ ಪ್ರತಿಸ್ಫರ್ಧಿಯಾಗಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರ ನಮ್ಮ ಅಪ್ಪಾಜಿ ಕ್ಯಾಂಟೀನ್ ಹಾಗೂ ಮಾಜಿ ಸಂಸದೆ ರಮ್ಯಾ ಕ್ಯಾಂಟೀನ್ ನಂತರ ಈಗ ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.
ಮಂಡ್ಯದಲ್ಲಿ ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಯಡಿಯೂರಪ್ಪಜೀ ಕ್ಯಾಂಟೀನ್ ತೆರೆಯಲು ನಿರ್ದರಿಸಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಜಿತೇಂದ್ರ ಅವರು ಹೇಳಿದ್ದಾರೆ.
ಬಡವರು, ರೈತರು, ಆಟೊ ಚಾಲಕರು ಹಾಗೂ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 5 ರುಪಾಯಿ ಉಪಹಾರ ಹಾಗೂ ಊಟ ನೀಡಲಾಗುವುದು ಜಿತೇಂದ್ರ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆ ಜಾರಿಗೆ ತಂದಿದ್ದರು. ಅಲ್ಲದೆ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವೆಲ್ಲವನ್ನು ಮನಗಂಡು ಹಸಿವು ನೀಗಿಸುವ ಉದ್ದೇಶದಿಂದ ಅವರ ಹೆಸರಿನಲ್ಲಿ ಕ್ಯಾಂಟೀನ್‌ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ನಗರದ ಸುಭಾಷ್‌ ನಗರದ ಒಂದನೇ ತಿರುವಿನಲ್ಲಿ ಕ್ಯಾಂಟೀನ್‌ ತೆರೆಯಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT