ಬಿಎಸ್ ಯಡಿಯೂರಪ್ಪ 
ರಾಜಕೀಯ

ಇಂದಿರಾ, ಅಪ್ಪಾಜಿ, ರಮ್ಯಾ ಕ್ಯಾಂಟೀನ್ ಆಯ್ತು, ಈಗ ಯಡಿಯೂರಪ್ಪಾಜಿ ಕ್ಯಾಂಟೀನ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ನಂತರ ಅದಕ್ಕೆ ಪ್ರತಿಸ್ಫರ್ಧಿಯಾಗಿ ಜೆಡಿಎಸ್....

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ ನಂತರ ಅದಕ್ಕೆ ಪ್ರತಿಸ್ಫರ್ಧಿಯಾಗಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಟಿಎ ಶರವಣ ಅವರ ನಮ್ಮ ಅಪ್ಪಾಜಿ ಕ್ಯಾಂಟೀನ್ ಹಾಗೂ ಮಾಜಿ ಸಂಸದೆ ರಮ್ಯಾ ಕ್ಯಾಂಟೀನ್ ನಂತರ ಈಗ ಮಂಡ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಯಾಂಟೀನ್ ಆರಂಭಿಸಲಾಗುತ್ತಿದೆ.
ಮಂಡ್ಯದಲ್ಲಿ ಯಡಿಯೂರಪ್ಪ ಅಭಿಮಾನಿಗಳ ಸಂಘ ಜಿಲ್ಲಾ ಘಟಕದ ವತಿಯಿಂದ ಯಡಿಯೂರಪ್ಪಜೀ ಕ್ಯಾಂಟೀನ್ ತೆರೆಯಲು ನಿರ್ದರಿಸಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್.ಜಿತೇಂದ್ರ ಅವರು ಹೇಳಿದ್ದಾರೆ.
ಬಡವರು, ರೈತರು, ಆಟೊ ಚಾಲಕರು ಹಾಗೂ ಕಾರ್ಮಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ 5 ರುಪಾಯಿ ಉಪಹಾರ ಹಾಗೂ ಊಟ ನೀಡಲಾಗುವುದು ಜಿತೇಂದ್ರ ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಜನಪರ ಯೋಜನೆ ಜಾರಿಗೆ ತಂದಿದ್ದರು. ಅಲ್ಲದೆ ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವೆಲ್ಲವನ್ನು ಮನಗಂಡು ಹಸಿವು ನೀಗಿಸುವ ಉದ್ದೇಶದಿಂದ ಅವರ ಹೆಸರಿನಲ್ಲಿ ಕ್ಯಾಂಟೀನ್‌ ತೆರೆಯಲು ತೀರ್ಮಾನಿಸಲಾಗಿದ್ದು, ಶೀಘ್ರದಲ್ಲಿಯೇ ನಗರದ ಸುಭಾಷ್‌ ನಗರದ ಒಂದನೇ ತಿರುವಿನಲ್ಲಿ ಕ್ಯಾಂಟೀನ್‌ ತೆರೆಯಲಾಗುವುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ