ಸಂಭಾಷಣೆ ನಿರತ ಬಿಎಸ್ ವೈ ಹಾಗೂ ಯಡಿಯೂರಪ್ಪ 
ರಾಜಕೀಯ

ಬಿಎಸ್‌ವೈ ಮತ್ತು ಅನಂತಕುಮಾರ್‌ ವಿರುದ್ಧ ಎಸಿಬಿಗೆ ಕಾಂಗ್ರೆಸ್ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದದ ಆರೋಪಕ್ಕೆ ಸಂಬಂಧಿಸಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದದ ಆರೋಪಕ್ಕೆ ಸಂಬಂಧಿಸಿದ್ದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಯ ಕಾನೂನು ಘಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅನಂತಕುಮಾರ್‌ ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ(ಎಸಿಬಿ) ಬುಧವಾರ  ದೂರು ನೀಡಿದೆ.
ಸಿದ್ದರಾಮಯ್ಯ ಅವರು ಹೈಕಮಾಂಡ್ ಗೆ ಒಂದು ಸಾವಿರ ಕೋಟಿ ರುಪಾಯಿ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅನಂತಕುಮಾರ್ ನಡುವಿನ ಸಂಭಾಷಣೆ ಕುರಿತು ಕೆಪಿಸಿಸಿ ಕಾನೂನು ಘಟಕ ಎಸಿಬಿಗೆ ದೂರು ನೀಡಿದ್ದು, ಈ ಬಗ್ಗೆ ವಿಸ್ತೃತ ತನಿಖೆ ನಡೆಸಬೇಕು ಮತ್ತು ಸಂಭಾಷಣೆ ನಡೆದ ಬಿಜೆಪಿ ಕಚೇರಿಯಲ್ಲಿರುವ ಸಿಸಿಟಿವ ದೃಶ್ಯಗಳನ್ನು ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದೆ.
ಯಡಿಯೂರಪ್ಪ ಮತ್ತು ಅನಂತಕುಮಾರ್‌ ನಡುವೆ ನಡೆದ ಸಂಭಾಷಣೆಯ ಪ್ರಕಾರ, ತಾವು ಲಂಚರೂಪದಲ್ಲಿ ಬಿಜೆಪಿ ಹೈಕಮಾಂಡ್‌ಗೆ ಹಣ ನೀಡಿರುವುದನ್ನು ಒಪ್ಪಿಕೊಂಡಿದ್ದು, ಆ ಇಬ್ಬರು ನಾಯಕರು ಈ ಕೂಡಲೇ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಮತ್ತು ಸರ್ಕಾರ ಬಿಜೆಪಿ ಕಚೇರಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಧನಂಜಯ್ ಅವರು ಒತ್ತಾಯಿಸಿದ್ದಾರೆ.
ಒಂದು ವೇಳೆ ಅವರು ರಾಜಿನಾಮೆ ನೀಡದೇ ಹೋದಲ್ಲಿ ಅವರ ಮುಖವಾಡವನ್ನು ಜನತಾ ನ್ಯಾಯಾಲಯದಲ್ಲಿ ಕಳಚಲಾಗುವುದು. ಅಂದೂ ಭ್ರಷ್ಟರು ಇಂದೂ ಭ್ರಷ್ಟರೂ ಅಂತ ಹೋರಾಟ ಮಾಡುತ್ತೇವೆ ಎಂದು ಧನಂಜಯ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT