ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು 
ರಾಜಕೀಯ

ಬಳ್ಳಾರಿಯಲ್ಲಿ ಕರುಣಾಕರ ರೆಡ್ಡಿ v/s ರೆಡ್ಡಿ ಬ್ರದರ್ಸ್ ಕೋಲ್ಡ್ ವಾರ್!

ಮಾಜಿ ಸಚಿವ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸು ಹಾಗೂ ಸಂಸದ ಬಿ. ಶ್ರೀರಾಮುಲು ವಿರುದ್ಧ 10 ಕ್ರಿಮಿನಲ್ ಕೇಸುಗಳನ್ನು ಕರುಣಾಕರ ರೆಡ್ಡಿ ದಾಖಲಿಸಿರುವುದು

ಬಳ್ಳಾರಿ: ಮಾಜಿ ಸಚಿವ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸು ಹಾಗೂ ಸಂಸದ ಬಿ. ಶ್ರೀರಾಮುಲು ವಿರುದ್ಧ 10 ಕ್ರಿಮಿನಲ್ ಕೇಸುಗಳನ್ನು ಕರುಣಾಕರ ರೆಡ್ಡಿ ದಾಖಲಿಸಿರುವುದು ಮೇಲ್ನೋಟಕ್ಕೆ ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಕದನ ಎಂಬಂತೆ ಬಿಂಬಿತವಾಗುತ್ತಿದೆ.

ಆದರೆ ನಿಜವಾಗಿ ಸಮರ ಆರಂಭವಾಗಿರುವುದು ಕರುಣಾಕರ ರೆಡ್ಡಿ ಮತ್ತು ಜನಾರ್ಧನ ರೆಡ್ಡಿ ಹಾಗೂ ಸೋಮಶೇಖರ ರೆಡ್ಡಿ ನಡುವೆ ಎಂಬುದು ಜಗಜ್ಜಾಹೀರಾಗಿದೆ. ರೆಡ್ಡಿ ಕುಟುಂಬದ ಕೌಟುಂಬಿಕ ಕಲಹ ಬೀದಿಗೆ ಬಂದಿದೆ.

ತಮ್ಮ ಅಣ್ಣ ಕರುಣಾಕರ ರೆಡ್ಡಿಯಿಂದ ಸಹೋದರರಾದ ಜನಾರ್ದನ ರೆಡ್ಡಿ ಮತ್ತು ಸೋಮಶೇಖರ ರೆಡ್ಡಿ ಹಲವು ದಿನಗಳಿಂದ ಅಂತರ ಕಾಯ್ದುಕೊಂಡೇ ಬಂದಿದ್ದಾರೆ. ಆದರೆ ಶ್ರೀರಾಮುಲು ಮಾತ್ರ ಜನಾರ್ದನ ರೆಡ್ಡಿಯ ಆಪ್ತರಾಗಿದ್ದಾರೆ.

ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕಾಲೋನಿ ಜಮೀನು ವಿವಾದದಲ್ಲಿ ಶ್ರೀರಾಮುಲು ಜೊತೆಗೆ ಜನಾರ್ದನ ಮತ್ತು ಸೋಮಶೇಖರ್ ರೆಡ್ಡಿ ಅವರನ್ನು ಕೋರ್ಟ್ ಗೆ ಎಳೆತರಲು ಕರುಣಾಕರ ರೆಡ್ಡಿ ಯತ್ನಿಸುತ್ತಿದ್ದಾರೆ.

ಪ್ರತೀಕಾರ ತೀರಿಸಿಕೊಳ್ಳುವ ಸಲುವಾಗಿ ವಾಲ್ಮಾಕಿ ಜನಾಂಗದ ವ್ಯಕ್ತಿಯೊಬ್ಬರಿಂದ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸು ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಶ್ರೀರಾಮುಲು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ದೂರು ನೀಡಿರುವ ವ್ಯಕ್ತಿ ಯಾರೆಂಬುದೇ ನನಗೆ ಗೊತ್ತಿಲ್ಲ, ಆತ ನನ್ನ ಬೆಂಬಲಿಗನಲ್ಲ ಎಂದು ಹೇಳಿದ್ದಾರೆ. ಆದರೆ ರೆಡ್ಡಿ ಸಹೋದರರ ನಡುವಿನ ಕಲಹಕ್ಕೆ ಏನು ಕಾರಣ ಎಂಬರು ಇದುವರೆಗೂ ಯಾರೋಬ್ಬರಿಗೂ ಸ್ಪಷ್ಟವಾಗಿ ತಿಳಿದಿಲ್ಲ.

2013ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ ಆರ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿದ್ದ ಕರುಣಾಕರ ರೆಡ್ಡಿ ಸೋಲನುಭವಿಸಿದರು. ಇದೇ ಕಾರಣ ಇಬ್ಬರ ನಡುವಿನ ಭಿನ್ನಾಭಿಪ್ರಾಯ ಹೆಚ್ಚಲು ಕಾರಣವಾಯಿತು ಎನ್ನಲಾಗಿದೆ.

ಕರುಣಾಕರ ರೆಡ್ಡಿ ಹಲವು ವರ್ಷಗಳಿಂದಲೂ ಬಿಜೆಪಿಯಲ್ಲೇ ಇದ್ದಾರೆ, ಅವರು ಇಂದಿಗೂ ಬಿಜೆಪಿ ಸಖ್ಯ ತೊರೆದಿಲ್ಲ, ಆದರೆ ಇತ್ತೀಚೆಗೆ ಬಳ್ಳಾರಿಯಲ್ಲಿ ನಡೆದ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಕರುಣಾಕರ ರೆಡ್ಡಿ ಭಾಗವಹಿಸಲಿಲ್ಲ, ಆದರೆ ಬಿಜೆಪಿಯ ಹಲವು ಕಾರ್ಯಕ್ರಮಗಳಲ್ಲಿ ಸೋಮಶೇಖರ ರೆಡ್ಡಿ ಭಾಗವಹಿಸಿದ್ದರು.

ಕಳೆದ ವರ್ಷದ ನವೆಂಬರ್ ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ನಡೆದ ಜನಾರ್ದನ ರೆಡ್ಡಿ ಮಗಳ ವೈಭವೋಪೇತ ಮದುವೆಯಲ್ಲಿಯೂ ಕರಣಾಕರ ರೆಡ್ಡಿ ಭಾಗವಹಿಸಿರಲಿಲ್ಲ. ವಿವಾಹದ ಆಮಂತ್ರಣ ಪತ್ರಿಕೆಯಲ್ಲಿ ಕರುಣಾಕರ ರೆಡ್ಡಿ ಹೆಸರು ಎಲ್ಲಿಯೂ ನಮೂದಿಸಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT