ಯಡಿಯೂರಪ್ಪ 
ರಾಜಕೀಯ

ಐಟಿ ಇಲಾಖೆ ಸೀಜ್ ಮಾಡಿರುವ ಗೋವಿಂದರಾಜು ಡೈರಿಯನ್ನು ಸಾರ್ವಜನಿಕರ ಮುಂದೆ ಬಹಿರಂಗಪಡಿಸಿ: ಯಡಿಯೂರಪ್ಪ

ಕೆಪಿಸಿಸಿ ಖಜಾಂಚಿ ಕೆ. ಗೋವಿಂದರಾಜು ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿರುವ ಡೈರಿಯನ್ನು ಸಾರ್ವಜನಿಕವಾಗಿ ...

ಕಲಬುರಗಿ: ಕೆಪಿಸಿಸಿ ಖಜಾಂಚಿ ಕೆ. ಗೋವಿಂದರಾಜು ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿರುವ ಡೈರಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಹೈಕಮಾಂಡ್‌ಗೆ 1,000 ಕೋಟಿ ಹಣ ಸಂದಾಯ ಮಾಡಿದ್ದು ಸುಳ್ಳು ಎಂದು ಸಾಬೀತಾದರೆ ನಾನು ರಾಜಕೀಯ ನಿವೃತ್ತಿ ಪಡೆಯಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಸ್ಟೀಲ್ ಬ್ರಿಡ್ಜ್ ಗಾಗಿ ಸಿದ್ದರಾಮಯ್ಯ 65 ಕೋಟಿ ರು ಕಿಕ್ ಬ್ಯಾಕ್ ಪಡೆದಿರುವುದು ಕೂಡ ಗೋವಿಂದರಾಜು ಅವರ ಡೈರಿಯಲ್ಲಿ ಉಲ್ಲೇಖವಾಗಿದೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜು ಅವರ ಮನೆಯಲ್ಲಿ ಸಿಕ್ಕ ಡೈರಿ ಹಾಗೂ ಅದರಲ್ಲಿರುವ ಆರೋಪಗಳ ಬಗೆಗೆ ತನಿಖೆ ನಡೆಸುವಂತೆ ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಅವರು ಹೇಳಿದ್ದಾರೆ.

ಒಂದು ವೇಳೆ ಗೋವಿಂದರಾಜು ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ಡೈರಿ ಸೀಜ್ ಮಾಡಲಿಲ್ಲ ಎಂದು ಸಿಎಂ ಒಪ್ಪಿಕೊಂಡರೇ ತಾವು ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಹೇಳಿರುವ ಅವರು ಕಾಂಗ್ರೆಸ್ ಹಮ್ಮಿಕೊಂಡಿರುವ ಸತ್ಯಮೇವ ಜಯತೇ ಪ್ರತಿಭಟನಾ ರ್ಯಾಲಿಯನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT